ಬೆಂಗಳೂರು : ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆʼ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ನಕ್ಸಲರ ಶಸ್ತ್ರಾಸ್ತ್ರ ದ ಕುರಿತ ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ʼಕಾಡಿನಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ಪೊಲೀಸರು ಹುಡುಕುತ್ತಾರೆ. ನಾವು ಮಾಡುವ ಕೆಲಸ ಮಾಡುತ್ತೇವೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಕೂಡ ಸರಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ?ʼ ಎಂದರು.
ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ʼಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾವಹಿಸಲಿದ್ದರೆʼ ಎಂದು ಹೇಳಿದರು.
ಎನ್ಕೌಂಟರ್ನಲ್ಲಿ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಿದ್ದಾರೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…