Featured

ನಗರಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನ: ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಸುಂದರ ಪುತ್ತೂರು, ಪಾರದರ್ಶಕ ಆಡಳಿತದ ದೃಷ್ಟಿಕೋನವನ್ನು ಇರಿಸಿಕೊಂಡಿರುವ ಪುತ್ತೂರಿನ ಜನತೆ ಈ ಬಾರಿ ನಗರಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅತ್ಯಂತ ಹೆಚ್ಚು ಸ್ಥಾನಗಳಿಂದ ಅಧಿಕಾರಕ್ಕೆ ತರುತ್ತಾರೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರನ್ನು ಸಂಪರ್ಕಿಸುವ ಸಂದರ್ಭದಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗಿದೆ. ಪಕ್ಷದಿಂದ ಶಕ್ತಿಯುತ ಅಭ್ಯರ್ಥಿಗಳಿಗೆ ಈ ಬಾರಿ ಅವಕಾಶ ನೀಡಲಾಗಿದ್ದು, ಇವರನ್ನು ಗೆಲ್ಲಿಸಿಕೊಡಬೇಕು ಎಂದು ವಿನಂತಿಸಿದರು.

ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸುವ ಶಕ್ತಿಯೇ ರಾಜ್ಯ ಸರಕಾರಕ್ಕೆ ಇಲ್ಲ. ಸ್ಥಳೀಯಾಡಳಿತಗಳಲ್ಲಿ ಇ-ಆಡಳಿತವನ್ನು ಅನುಷ್ಠಾನ ಮಾಡಲು ಎಷ್ಟು ಒತ್ತಾಯಿಸಿದರೂ ಸ್ಪಂದಿಸಿಲ್ಲ. ಪುತ್ತೂರಿನಲ್ಲಿ ಇ- ಆಡಳಿತ, ಸಕಾಲವನ್ನು ಸಮರ್ಪಕಗೊಳಿಸಲು ಬಿಜೆಪಿ ಸದಸ್ಯರು ಬದ್ಧರಾಗಿದ್ದಾರೆ. ಡಾ| ಶಿವರಾಮ ಕಾರಂತರ ಬಾಲವನದ ಅಭಿವೃದ್ಧಿ, ಪ್ರವಾಸಿ ಕೇಂದ್ರ ಬೀರಮಲೆ ಬೆಟ್ಟದ ಅಭಿವೃದ್ಧಿಗೆ ಬಿಜೆಪಿ ಆಡಳಿತ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಒಂದು ನಿವೇಶನ ಕೊಟ್ಟಿಲ್ಲ :
ಪುತ್ತೂರು ನಗರಸಭೆಯಲ್ಲಿ ಹಿಂದಿನ ಶಾಸಕರು ಹಾಗೂ ಕಾಂಗ್ರೆಸ್‌ನ ಮಧ್ಯೆ ಬಣ ರಾಜಕೀಯದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬಡವರಿಗೆ ಒಂದು ನಿವೇಶನ ಒದಗಿಸಿಕೊಡಲೂ ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದ ಶ್ರೀನಿವಾಸ ಪೂಜಾರಿ, ನಗರದಲ್ಲಿ ಕಸ ವಿಲೇವಾರಿ, ನಗರಸಭಾ ಕಚೇರಿಯಲ್ಲಿ ಬ್ರೋಕರ್‌ಗಳ ಹಾವಳಿ ನಿಲ್ಲಿಸುವ ನಿಟ್ಟಿನಲ್ಲಿ ಮತ್ತು ಮಾದರಿ ಸ್ಥಳೀಯಾಡಳಿತವಾಗಿ ಮಾಡುವ ನಿಟ್ಟಿನಲ್ಲಿ ಬಿಜೆಪಿಯ 31 ಸದಸ್ಯರನ್ನು ಗೆಲ್ಲಿಸಿಕೊಡಬೇಕು ಎಂದು ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ಜೀವಂಧರ್‌ ಜೈನ್‌, ರಾಜೇಶ್‌ ಬನ್ನೂರು, ದಿನೇಶ್‌ ಮೆದು ಉಪಸ್ಥಿತರಿದ್ದರು.

ಭಾವನಾತ್ಮಕ ಸಂಗತಿಯೇ?
ಬಿಜೆಪಿಯವರು ಭಾವನಾತ್ಮಕವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಕೋಟ, ಮೂಡಬಿದಿರೆಯಲ್ಲಿ ಹಟ್ಟಿಯಿಂದ ಕತ್ತಿ ಛಳಪಿಸಿ ದನಗಳನ್ನು ದರೋಡೆ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಇದೇ ರೀತಿಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಬಿಜೆಪಿಯವರು ಮಾತನಾಡದಿದ್ದರೆ ಜನರ ಪರಿಸ್ಥಿತಿ ಏನಾಗಬಹುದು? ಇದು ಭಾವನಾತ್ಮಕ ವಿಚಾರವೇ? ಎಂದು ಪ್ರಶ್ನಿಸಿದರು. ಗೋ ಕಳ್ಳರು ಕತ್ತಿ ಹಿಡಿದಾಗ ನೀವು ಭಾವನಾತ್ಮಕವಾಗಿ ಅವರಲ್ಲಿ ಮಾತನಾಡಿ ಎಂದು ಸವಾಲು ಹಾಕಿದರು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

15 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

16 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago