Featured

ನಗರಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನ: ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಸುಂದರ ಪುತ್ತೂರು, ಪಾರದರ್ಶಕ ಆಡಳಿತದ ದೃಷ್ಟಿಕೋನವನ್ನು ಇರಿಸಿಕೊಂಡಿರುವ ಪುತ್ತೂರಿನ ಜನತೆ ಈ ಬಾರಿ ನಗರಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅತ್ಯಂತ ಹೆಚ್ಚು ಸ್ಥಾನಗಳಿಂದ ಅಧಿಕಾರಕ್ಕೆ ತರುತ್ತಾರೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರನ್ನು ಸಂಪರ್ಕಿಸುವ ಸಂದರ್ಭದಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗಿದೆ. ಪಕ್ಷದಿಂದ ಶಕ್ತಿಯುತ ಅಭ್ಯರ್ಥಿಗಳಿಗೆ ಈ ಬಾರಿ ಅವಕಾಶ ನೀಡಲಾಗಿದ್ದು, ಇವರನ್ನು ಗೆಲ್ಲಿಸಿಕೊಡಬೇಕು ಎಂದು ವಿನಂತಿಸಿದರು.

ಅರ್ಜಿಗಳನ್ನು ಸಕಾಲದಲ್ಲಿ ಸ್ವೀಕರಿಸುವ ಶಕ್ತಿಯೇ ರಾಜ್ಯ ಸರಕಾರಕ್ಕೆ ಇಲ್ಲ. ಸ್ಥಳೀಯಾಡಳಿತಗಳಲ್ಲಿ ಇ-ಆಡಳಿತವನ್ನು ಅನುಷ್ಠಾನ ಮಾಡಲು ಎಷ್ಟು ಒತ್ತಾಯಿಸಿದರೂ ಸ್ಪಂದಿಸಿಲ್ಲ. ಪುತ್ತೂರಿನಲ್ಲಿ ಇ- ಆಡಳಿತ, ಸಕಾಲವನ್ನು ಸಮರ್ಪಕಗೊಳಿಸಲು ಬಿಜೆಪಿ ಸದಸ್ಯರು ಬದ್ಧರಾಗಿದ್ದಾರೆ. ಡಾ| ಶಿವರಾಮ ಕಾರಂತರ ಬಾಲವನದ ಅಭಿವೃದ್ಧಿ, ಪ್ರವಾಸಿ ಕೇಂದ್ರ ಬೀರಮಲೆ ಬೆಟ್ಟದ ಅಭಿವೃದ್ಧಿಗೆ ಬಿಜೆಪಿ ಆಡಳಿತ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಒಂದು ನಿವೇಶನ ಕೊಟ್ಟಿಲ್ಲ :
ಪುತ್ತೂರು ನಗರಸಭೆಯಲ್ಲಿ ಹಿಂದಿನ ಶಾಸಕರು ಹಾಗೂ ಕಾಂಗ್ರೆಸ್‌ನ ಮಧ್ಯೆ ಬಣ ರಾಜಕೀಯದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬಡವರಿಗೆ ಒಂದು ನಿವೇಶನ ಒದಗಿಸಿಕೊಡಲೂ ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದ ಶ್ರೀನಿವಾಸ ಪೂಜಾರಿ, ನಗರದಲ್ಲಿ ಕಸ ವಿಲೇವಾರಿ, ನಗರಸಭಾ ಕಚೇರಿಯಲ್ಲಿ ಬ್ರೋಕರ್‌ಗಳ ಹಾವಳಿ ನಿಲ್ಲಿಸುವ ನಿಟ್ಟಿನಲ್ಲಿ ಮತ್ತು ಮಾದರಿ ಸ್ಥಳೀಯಾಡಳಿತವಾಗಿ ಮಾಡುವ ನಿಟ್ಟಿನಲ್ಲಿ ಬಿಜೆಪಿಯ 31 ಸದಸ್ಯರನ್ನು ಗೆಲ್ಲಿಸಿಕೊಡಬೇಕು ಎಂದು ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ಜೀವಂಧರ್‌ ಜೈನ್‌, ರಾಜೇಶ್‌ ಬನ್ನೂರು, ದಿನೇಶ್‌ ಮೆದು ಉಪಸ್ಥಿತರಿದ್ದರು.

ಭಾವನಾತ್ಮಕ ಸಂಗತಿಯೇ?
ಬಿಜೆಪಿಯವರು ಭಾವನಾತ್ಮಕವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಕೋಟ, ಮೂಡಬಿದಿರೆಯಲ್ಲಿ ಹಟ್ಟಿಯಿಂದ ಕತ್ತಿ ಛಳಪಿಸಿ ದನಗಳನ್ನು ದರೋಡೆ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಇದೇ ರೀತಿಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಬಿಜೆಪಿಯವರು ಮಾತನಾಡದಿದ್ದರೆ ಜನರ ಪರಿಸ್ಥಿತಿ ಏನಾಗಬಹುದು? ಇದು ಭಾವನಾತ್ಮಕ ವಿಚಾರವೇ? ಎಂದು ಪ್ರಶ್ನಿಸಿದರು. ಗೋ ಕಳ್ಳರು ಕತ್ತಿ ಹಿಡಿದಾಗ ನೀವು ಭಾವನಾತ್ಮಕವಾಗಿ ಅವರಲ್ಲಿ ಮಾತನಾಡಿ ಎಂದು ಸವಾಲು ಹಾಕಿದರು.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

2 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

4 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

5 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

5 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

5 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

5 hours ago