Featured

ನಗರಾಭಿವೃದ್ಧಿ ಇಲಾಖೆ ಎಡವಟ್ಟು : 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ಗೆ ವರ್ಗಾವಣೆ ಆದೇಶ – vishwanews24

ನಗರಾಭಿವೃದ್ಧಿ ಇಲಾಖೆ ಎಡವಟ್ಟು : 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ಗೆ ವರ್ಗಾವಣೆ ಆದೇಶ

ಕಲಬುರಗಿ: ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃತಪಟ್ಟು 6 ತಿಂಗಳಾದ ನಂತರ ಮೃತ ಇಂಜಿನಿಯರ್‌ ಅನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿ ಎಡವಟ್ಟು ಮಾಡಿಕೊಂಡಿದೆ.

ಯಾವುದೇ ಒಂದು ಸಂಘ, ಸಂಸ್ಥೆ ಅಥವಾ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರ ಬಗ್ಗೆ ಆಯಾ ಸಂಸ್ಥೆಯ ಮುಖ್ಯಸ್ಥರು ತಿಗಾ ವಹಿಸಿರುತ್ತಾರೆ. ಇನ್ನು ಕಂಪನಿ ಮುಖ್ಯಸ್ಥನಲ್ಲದಿದ್ದರೂ ಅವರ ಕೈಕೆಳಗಿರುವ ಆಡಳಿತ ಸಿಬ್ಬಂದಿ ಎಲ್ಲ ನೌಕರರ ಮಾಹಿತಿಯನ್ನು ಸಂಗ್ರಹಿಸುತ್ತಿರುತ್ತಾರೆ. ಆದರೆ, ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃತಪಟ್ಟು 6 ತಿಂಗಳಾದರೂ ಈ ಬಗ್ಗೆ ಸರ್ಕಾರಕ್ಕೆ ಮಾಹಿತಿಯೇ ಸಿಕ್ಕಿಲ್ಲ. ಜೊತೆಗೆ, ಇಂಜಿನಿಯರ್ ಮೃತಪಟ್ಟು 6 ತಿಂಗಳು ಗೈರು ಹಾಜರಾದರೂ ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ. ಇದರ ಬದಲಾಗಿ ವಾರ್ಷಿಕ ವರ್ಗಾವಣೆ ಮಾಡುವಂತೆ ಮೃತ ಇಂಜಿನಿಯರ್ ಹೆಸರನ್ನು ಉಲ್ಲೇಖಿಸಿ ವರ್ಗಾವಣೆ ಆದೇಶ ಸಿದ್ಧಪಡಿಸಿ ಕಚೇರಿ ಮತ್ತು ಮನೆಯ ವಿಳಾಸಕ್ಕೆ ರವಾನೆ ಮಾಡಿದೆ.

ಈ ಘಟನೆ ನಡೆದಿರುವುದು ಕಲಬುರಗಿ ಜಿಲ್ಲೆಯಲ್ಲಿ. ಮೃತ ಇಂಜಿನಿಯರ್ ಅಶೋಕ್ ಪುಟಪಾಕ್ ಎನ್ನುವವರು ಕಳೆದ 6 ತಿಂಗಳ ಹಿಂದೆ ಜನವರಿಯಲ್ಲಿಯೇ ಮೃತಪಟ್ಟಿದ್ದಾರೆ. ಆದರೆ, ಇದಾದ ನಂತರ ಜು.9ರಂದು ಈ ಇಂಜಿನಿಯರ್‌ನನ್ನು ನಗರಾಭಿವೃದ್ಧಿ ಇಲಾಖೆಯಿಂದ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್‌ ಅವರನ್ನು ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈಗ ಮೃತ ಅಧಿಕಾರಿ ಎಲ್ಲಿಂದ ಬಂದು ವರ್ಗಾವಣೆ ಪಡೆದು ಕೆಲಸ ಮಾಡಲು ಸಾಧ್ಯವಾಗುತ್ತದೆಯೇ ಎಂದು ಜನರು ನಗಾಡಿಕೊಳ್ಳುತ್ತಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಈ ಎಡವಟ್ಟು ನಡೆದಿದೆ. ಜನವರಿ 12ರಂದು ಮೃತಪಟ್ಟಿದ್ದ ಕಿರಿಯ ಇಂಜಿನಿಯರ್ ಅಶೋಕ ಅವರು, ಇಲಾಖೆಯ ನೌಕರ ಮೃತಪಟ್ಟಿದ್ದರು ಎಂಬ ಮಾಹಿತಿ ಇಲ್ಲದೆ ನಗರಾಭಿವೃದ್ಧಿ ಇಲಾಖೆ ಮೃತ ವ್ಯಕ್ತಿಯನ್ನ ವರ್ಗಾವಣೆ ಮಾಡಿ ಮುಜುಗುರಕ್ಕಿಡಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago