ಉಡುಪಿ: ದೇಶ ವಿರೋಧಿ ಘೋಷಣೆ ಕೂಗುವವರು, ನಗರ ನಕ್ಸಲರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು .
ಅವರು ಮಂಗಳವಾರ ಉಡುಪಿಯಲ್ಲಿ ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ನಿರ್ವಹಿಸಿದ ರೀತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಕುರಿತು ಮಾಧ್ಯಮಗದವರ ಪ್ರಶ್ನೆಗೆ ಉತ್ತರಿಸಿ, ಕೃಷಿ ಮಸೂದೆ ಜಾರಿಗೆ ತರುವ ಮುಂಚಿತವಾಗಿ ಉನ್ನತ ಮಟ್ಟದ ಸಮಿತಿಯಲ್ಲಿ ಚರ್ಚಿಸಿ ಜಾರಿಗೊಳಿಸಲಾಗಿದೆ ಈ ಸಮಿತಿಯಲ್ಲಿ ಪಂಜಾಬ್ ನ ಈಗಿನ ಮುಖ್ಯಮಂತ್ರಿ, ಮಧ್ಯಪ್ರದೇಶದ ಆಗಿನ ಮುಖ್ಯಮಂತ್ರಿ ಕೂಡ ಇದ್ದರು ಆದರೆ ಈಗ ಅವರುಗಳ ರಾಜ್ಯದ ರೈತರೇ ಪ್ರತಿಭಟನೆ ನಡೆಸುತ್ತಿರುವುದು ನೋಡಿದರೆ ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದರು.
ಎನ್ಯುನಲ್ಲಿ ದೇಶ ವಿರೋಧಿ ಹೇಳಿಕೆ ನೀಡಿದ ಉಮರ್ ಖಲೀದ ಪ್ರತಿಭಟನೆಯಲ್ಲಿದ್ದಾರೆ. ರಾಷ್ಟ್ರದ್ರೋಹ ಕೆಲಸದಲ್ಲಿ ತೊಡಗುವ ಇವರಿಗೂ ಮತ್ತು ಶ್ರಮವಹಿಸಿ ದುಡಿಯುವ ರೈತರೊಂದಿಗೆ ಹೋಲಿಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಕೇಂದ್ರ ಸರಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯಿದೆಯಿಂದ ರೈತರಿಗೆ ಯಾವುದೇ ಸಮಸ್ಯೆಯಿಲ್ಲ ಇದನ್ನು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಹೇಳುವ ಕೆಲಸ ಮಾಡಲಿದೆ ಎಂದರು.
ಕೋವಿಡ್ ಲಸಿಕೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಅವರು ಲಸಿಕೆ ಒಂದು ಪ್ರಯೋಗ ದೇಶದ ಜನತೆಗೆ ಉಪಯೋಗವಾಗಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ರಾಜಕೀಯ ಮಾಡುವವರ ಮಾಡಿಕೊಳ್ಳಲಿ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…