Featured

ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ “ನಮ್ಮ ಕ್ಲಿನಿಕ್” ಉಡುಪಿ ಜಿಲ್ಲೆಯಲ್ಲಿ 6 ಕ್ಲಿನಿಕ್ ಗಳ ಆರಂಭ – Vishwanews24

ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ “ನಮ್ಮ ಕ್ಲಿನಿಕ್” ಉಡುಪಿ ಜಿಲ್ಲೆಯಲ್ಲಿ 6 ಕ್ಲಿನಿಕ್ ಗಳ ಆರಂಭ

ನಗರ ಪ್ರದೇಶದ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತುಪಡಿಸಿ , ನಗರ ಮತ್ತು ಪಟ್ಟಣ ಪ್ರದೇಶದ ವಾರ್ಡ್ ನಲ್ಲಿ ಉತ್ತಮವಾಗಿ ಮತ್ತು ತ್ವರಿತವಾಗಿ ಆರೋಗ್ಯ ಸೇವೆಗಳನ್ನು ದೊರಕಿಸುವ ಉದ್ದೇಶದಿಂದ ,ರಾಜ್ಯ ಸರ್ಕಾರವು ರಾಜ್ಯಾದ್ಯಂತ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ಉದ್ದೇಶಿಸಿದ್ದು, ಉಡುಪಿ ಜಿಲ್ಲೆಯಲ್ಲಿ 6 ಸಂಖ್ಯೆಯ ನಮ್ಮ ಕ್ಲಿನಿಕ್ ಗಳ ಆರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿವೆ.

ನಗರ ಪ್ರದೇಶದ ಸಾರ್ವಜನಿಕರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸದುದ್ದೇಶ ಹೊಂದಿದ್ದು, ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ನಿರಂತರ ಆರೋಗ್ಯ ಪಾಲನೆಯನ್ನು ಖಾತ್ರಿಪಡಿಸುವ ಮತ್ತು ಕೆಳಹಂತದಿಂದ ಹಾಗೂ ಮೇಲಿನ ಹಂತದ ಸೇವೆಗಳನ್ನು ನೀಡುವ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ನಮ್ಮ ಕ್ಲಿನಿಕ್ ಹೊಂದಿದ್ದು, ನಗರ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರಿಕರಿಸುವ ಜೊತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶ ಸಹ ಇದೆ.

ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶರಣರ ವಿರುದ್ಧ ಎಫ್ಐಆರ್ – Vishwanews24

ನಮ್ಮ ಕ್ಲಿನಿಕ್ ವಿಶೇಷತೆ : ನಮ್ಮ ಕ್ಲಿನಿಕ್ ನಲ್ಲಿ ಒಬ್ಬರು ಡಾಕ್ಟರ್, ಒಬ್ಬರು ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಮತ್ತು ಒಬ್ಬ ಡಿ ಗ್ರೂಫ್ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದು, ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಅಗತ್ಯ ಔಷಧಿ ವಿತರಣೆ ನೀಡಲಾಗುವುದು, 12 ರೀತಿಯ ವಿವಿಧ ಆರೋಗ್ಯ ಸೇವೆಗಳು ಹಾಗೂ ರಕ್ತ, ಮೂತ್ರ ಪರೀಕ್ಷೆ ಸೇರಿದಂತೆ ಲ್ಯಾಬ್ ನಲ್ಲಿ 14 ರೀತಿಯ ವಿವಿಧ ಪ್ರಯೋಗಾಲಯ ಸೇವೆ ದೊರೆಯಲಿದೆ. ಬೆಳಗ್ಗೆ 9 ರಿಂದ ಸಂಜೆ 4.30 ರ ವರೆಗೆ ಈ ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದದವರಿಗೆ ಇ-ಸಂಜೀವಿನಿ ಮತ್ತು ಟೆಲಿ ಕೌನ್ಸಿಲಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 3, ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ 1 ಮತ್ತು ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ 2 ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ಅನುಮತಿ ದೊರೆತಿದ್ದು, ಈ ಕುರಿತಂತೆ ಈಗಾಗಲೇ ಅಗತ್ಯ ಸಿದ್ದತೆಗಳು ನಡೆದಿದ್ದು, ಸಿಬ್ಬಂದಿ ನೇಮಕ ಪ್ರಕ್ರಿಯೆ ನಡೆಯುತ್ತಿದೆ.

ನಮ್ಮ ಕ್ಲಿನಿಕ್ ಆರಂಭದಿಂದ ನಗರ ಪ್ರದೇಶದ ಜನತೆ, ತ್ವರಿತವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಪಡೆದು ಉತ್ತಮ ಆರೋಗ್ಯವನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ, ಉಡುಪಿ ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್ ಸಿಬ್ಬಂದಿಗಳ ನೇಮಕಕ್ಕೆ ಈಗಾಗಲೇ ಸಂದರ್ಶನ ನಡೆಸಲಾಗಿದೆ. ಜಿಲ್ಲೆಯಲ್ಲಿ ಶೀಘ್ರದಲ್ಲೇ ನಮ್ಮ ಕ್ಲಿನಿಕ್ ಗಳನ್ನು ಆರಂಭಗೊಂಡು ,ವೈದ್ಯರು ಮತ್ತು ಸಿಬ್ಬಂದಿಗಳು ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ಸೇವೆಗೆ ಲಭ್ಯವಾಗಲಿದ್ದಾರೆ:ಡಾ. ನಾಗಭೂಷಣ ಉಡುಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ,ಉಡುಪಿ ಜಿಲ್ಲೆ.

ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ – Vishwanews24

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago