Featured

ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ “ನಮ್ಮ ಕ್ಲಿನಿಕ್” ಉಡುಪಿ ಜಿಲ್ಲೆಯಲ್ಲಿ 6 ಕ್ಲಿನಿಕ್ ಗಳ ಆರಂಭ – Vishwanews24

ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ “ನಮ್ಮ ಕ್ಲಿನಿಕ್” ಉಡುಪಿ ಜಿಲ್ಲೆಯಲ್ಲಿ 6 ಕ್ಲಿನಿಕ್ ಗಳ ಆರಂಭ

ನಗರ ಪ್ರದೇಶದ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತುಪಡಿಸಿ , ನಗರ ಮತ್ತು ಪಟ್ಟಣ ಪ್ರದೇಶದ ವಾರ್ಡ್ ನಲ್ಲಿ ಉತ್ತಮವಾಗಿ ಮತ್ತು ತ್ವರಿತವಾಗಿ ಆರೋಗ್ಯ ಸೇವೆಗಳನ್ನು ದೊರಕಿಸುವ ಉದ್ದೇಶದಿಂದ ,ರಾಜ್ಯ ಸರ್ಕಾರವು ರಾಜ್ಯಾದ್ಯಂತ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ಉದ್ದೇಶಿಸಿದ್ದು, ಉಡುಪಿ ಜಿಲ್ಲೆಯಲ್ಲಿ 6 ಸಂಖ್ಯೆಯ ನಮ್ಮ ಕ್ಲಿನಿಕ್ ಗಳ ಆರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿವೆ.

ನಗರ ಪ್ರದೇಶದ ಸಾರ್ವಜನಿಕರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸದುದ್ದೇಶ ಹೊಂದಿದ್ದು, ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ನಿರಂತರ ಆರೋಗ್ಯ ಪಾಲನೆಯನ್ನು ಖಾತ್ರಿಪಡಿಸುವ ಮತ್ತು ಕೆಳಹಂತದಿಂದ ಹಾಗೂ ಮೇಲಿನ ಹಂತದ ಸೇವೆಗಳನ್ನು ನೀಡುವ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ನಮ್ಮ ಕ್ಲಿನಿಕ್ ಹೊಂದಿದ್ದು, ನಗರ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರಿಕರಿಸುವ ಜೊತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶ ಸಹ ಇದೆ.

ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶರಣರ ವಿರುದ್ಧ ಎಫ್ಐಆರ್ – Vishwanews24

ನಮ್ಮ ಕ್ಲಿನಿಕ್ ವಿಶೇಷತೆ : ನಮ್ಮ ಕ್ಲಿನಿಕ್ ನಲ್ಲಿ ಒಬ್ಬರು ಡಾಕ್ಟರ್, ಒಬ್ಬರು ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಮತ್ತು ಒಬ್ಬ ಡಿ ಗ್ರೂಫ್ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದು, ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಅಗತ್ಯ ಔಷಧಿ ವಿತರಣೆ ನೀಡಲಾಗುವುದು, 12 ರೀತಿಯ ವಿವಿಧ ಆರೋಗ್ಯ ಸೇವೆಗಳು ಹಾಗೂ ರಕ್ತ, ಮೂತ್ರ ಪರೀಕ್ಷೆ ಸೇರಿದಂತೆ ಲ್ಯಾಬ್ ನಲ್ಲಿ 14 ರೀತಿಯ ವಿವಿಧ ಪ್ರಯೋಗಾಲಯ ಸೇವೆ ದೊರೆಯಲಿದೆ. ಬೆಳಗ್ಗೆ 9 ರಿಂದ ಸಂಜೆ 4.30 ರ ವರೆಗೆ ಈ ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದದವರಿಗೆ ಇ-ಸಂಜೀವಿನಿ ಮತ್ತು ಟೆಲಿ ಕೌನ್ಸಿಲಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 3, ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ 1 ಮತ್ತು ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ 2 ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ಅನುಮತಿ ದೊರೆತಿದ್ದು, ಈ ಕುರಿತಂತೆ ಈಗಾಗಲೇ ಅಗತ್ಯ ಸಿದ್ದತೆಗಳು ನಡೆದಿದ್ದು, ಸಿಬ್ಬಂದಿ ನೇಮಕ ಪ್ರಕ್ರಿಯೆ ನಡೆಯುತ್ತಿದೆ.

ನಮ್ಮ ಕ್ಲಿನಿಕ್ ಆರಂಭದಿಂದ ನಗರ ಪ್ರದೇಶದ ಜನತೆ, ತ್ವರಿತವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಪಡೆದು ಉತ್ತಮ ಆರೋಗ್ಯವನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ, ಉಡುಪಿ ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್ ಸಿಬ್ಬಂದಿಗಳ ನೇಮಕಕ್ಕೆ ಈಗಾಗಲೇ ಸಂದರ್ಶನ ನಡೆಸಲಾಗಿದೆ. ಜಿಲ್ಲೆಯಲ್ಲಿ ಶೀಘ್ರದಲ್ಲೇ ನಮ್ಮ ಕ್ಲಿನಿಕ್ ಗಳನ್ನು ಆರಂಭಗೊಂಡು ,ವೈದ್ಯರು ಮತ್ತು ಸಿಬ್ಬಂದಿಗಳು ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ಸೇವೆಗೆ ಲಭ್ಯವಾಗಲಿದ್ದಾರೆ:ಡಾ. ನಾಗಭೂಷಣ ಉಡುಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ,ಉಡುಪಿ ಜಿಲ್ಲೆ.

ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ – Vishwanews24

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

14 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago