Featured

ನಟಿ ಅಮೂಲ್ಯ ದಂಪತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆ -Vishwanews24

ನಟಿ ಅಮೂಲ್ಯ ದಂಪತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆ -Vishwanews24

ಬೆಂಗಳೂರು: ನಟಿ ಅಮೂಲ್ಯ, ಜಗದೀಶ್ ದಂಪತಿ ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ಖರ್ಚು ಮಾಡುತ್ತಿದ್ದ ಹಣಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು ಜೈ ಶ್ರೀರಾಮ್ ಎಂದು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಣವನ್ನು ನೀಡಿರುವ ರಶೀದಿಗಳನ್ನು ಅಮೂಲ್ಯ ಮತ್ತು ಜಗದೀಶ್ ಹಂಚಿಕೊಂಡಿದ್ದಾರೆ.

ಜಗದೀಶ್ ಅವರು 1.50 ಲಕ್ಷ ರೂ. ಹಾಗೂ ಅವರ ತಂದೆ ಜಿ.ಎಚ್. ರಾಮಚಂದ್ರ ಅವರ ಹೆಸರಿನಲ್ಲಿ 1 ಲಕ್ಷ ರೂಪಾಯಿ ಹಣವನ್ನು ರಾಮಂದಿರ ನಿರ್ಮಾಣಕ್ಕೆ ನೀಡಲಾಗಿದೆ. ಚೆಕ್‍ಗೆ ಸಹಿ ಹಾಕುತ್ತಿರುವ ಹಾಗೂ ರಶೀದಿಗಳ ಫೋಟೋಗಳನ್ನು ಅಮೂಲ್ಯ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಯೋಧ್ಯೆ ಶ್ರೀರಾಮನಿಗಾಗಿ ನಮ್ಮ ಕಿರುಕಾಣಿಕೆ ಎಂದು ಕ್ಯಾಪ್ಷನ್ ಕೂಡ ನೀಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಕುಟುಂಬದ ಈ ಕಾರ್ಯಕ್ಕೆ ಸಾಕಷ್ಟು ಮೆಚ್ಚುಗೆ ಮತ್ತು ಉತ್ತಮವಾದ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ.

 

ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ ದಿನದಿಂದ ದೇಶಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ಮಾಡಲಾಗುತ್ತಿದೆ. ಅನೇಕ ರಾಜಕೀಯ ನಾಯಕರು, ರಾಮ ಭಕ್ತರು, ಉದ್ಯಮಿಗಳು, ನಟ-ನಟಿಯರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ಕರೆ ನೀಡಿದ್ದರು. ನಟ ಜಗ್ಗೇಶ್, ಬಹುಭಾಷಾ ನಟಿ ಪ್ರಣಿತಾ, ತೆಲುಗು ನಟ ಪವನ್ ಕಲ್ಯಾಣ್, ಇದೀಗ ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಕೂಡ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ : ಕಾಪು SCDCC ಬ್ಯಾಂಕ್- ಜನವರಿ 28 ರಂದು ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ-vishwanews24

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

44 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

1 hour ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

1 hour ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago