ಮುಂಬೈ: ಬಾಲಿವುಡ್ ನಟಿ ತನುಶ್ರೀ ದತ್ತ ಹಾಗೂ ನಟ ನಾನಾ ಪಾಟೇಕರ್ ವಿವಾದದ ಮಧ್ಯೆ ಈಗ ಹಾಟ್ ಬೆಡಗಿ ರಾಖಿ ಸಾವಂತ್ ಎಂಟ್ರಿ ಕೊಟ್ಟಿದ್ದು, ತನುಶ್ರೀ ದತ್ತ ಸಲಿಂಗಕಾಮಿ, ಆಕೆ ನನ್ನ ಮೇಲೆ ಸಾಕಷ್ಟು ಬಾರಿ ಅತ್ಯಾಚಾರ ನಡೆಸಿದ್ದಾರೆ ಎನ್ನುವ ಮೂಲಕ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ತನುಶ್ರೀ ದತ್ತಾ ನನ್ನ ಮೇಲೆ ಸತತವಾಗಿ ಅತ್ಯಾಚಾರ ಎಸಗಿದ್ದಾಳೆ. ತನುಶ್ರೀ ಯುವತಿಯಲ್ಲ. ಆಕೆ ಹುಡುಗರ ಸ್ವಭಾವ ಹೊಂದಿರುವವಳು. ಅವಳು ಸಲಿಂಗಿ(ಲೆಸ್ಬಿಯನ್). ಎಲ್ಲರೂ ಮೀಟೂ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಶಿ ಟೂ(#SheToo) ಎನ್ನುತ್ತೇನೆ ಎಂದು ಹೇಳಿಕೊಂಡಿರುವ ರಾಖಿ, ತನುಶ್ರೀ ನನ್ನ ಆತ್ಮೀಯ ಗೆಳತಿಯಾಗಿದ್ದಳು. ನನ್ನನ್ನು ಪಾರ್ಟಿಗಳಿಗೆ ಕರೆದೊಯ್ದಿದ್ದಾಳೆ ಎಂದರು.
ಈ ಘಟನೆ ನಡೆದಿದ್ದು 12 ವರ್ಷಗಳ ಹಿಂದೆ. ನಾನು ತನುಶ್ರೀ ಮನೆಗೆ ತೆರಳಿದ್ದಾಗ ಅಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಈ ಬಗ್ಗೆ ನನ್ನ ಬಳಿ ಸಾಕ್ಷಿಗಳಿವೆ ಎಂದು ಆರೋಪಿಸಿದ್ದಾರೆ.
ಈ ಎಲ್ಲಾ ಮಾಹಿತಿ ಬಹಿರಂಗೊಳಿಸಿದಂತೆ ನನಗೆ ಸಾಕಷ್ಟು ಜೀವ ಬೆದರಿಕೆ ಕರೆ ಬರುತ್ತಿವೆ. ಅದನ್ನು ಬೆದರಿಕೆಗಳನ್ನು ನೆನೆದರೆ ನನ್ನ ಕೈ ಕಾಲುಗಳು ಭಯದಿಂದ ನಡುಗುತ್ತಿವೆ. ಈಗ ನನಗೆ ಆಕೆಯ ಹೆಸರು ಹೇಳಲು ಸಹ ಭಯವಾಗುತ್ತಿದೆ. ತನುಶ್ರೀಯೇ ನನ್ನನ್ನು ಬಲತ್ಕಾರ ಮಾಡಿದ್ದು, ಇದು ಆಗಿನ 377 ಕಲಂ ವ್ಯಾಪ್ತಿಗೆ ಇದು ಬರುತ್ತದೆ. ತನುಶ್ರೀ ಹುಡುಗಿಯಲ್ಲ. ಆಕೆ ಮಿಸ್ ಇಂಡಿಯಾ ಆಗಿ ನನ್ನ ಉತ್ತಮ ಸ್ನೇಹಿತಳಾಗಿದ್ದಳು. ಸಿಗರೇಟ್ ನಲ್ಲಿ ತಂಬಾಕು ಖಾಲಿ ಮಾಡಿ ಡ್ರಗ್ಸ್ ಸೇರಿಸಿ, ತಾನು ಸೇವನೆ ಮಾಡಿದ್ದಲ್ಲದೆ, ನನಗೂ ಕೊಡಿಸಿದ್ದಳು..
ನನಗೆ ಇದನ್ನು ಹೇಳುವುದ್ದಕ್ಕೆ ತುಂಬಾ ನಾಚಿಕೆ ಆಗುತ್ತಿದೆ ಹಾಗೂ ದುಃಖವಾಗುತ್ತಿದೆ. ಒಬ್ಬಳು ಯುವತಿಯಾಗಿ ನಾನು ಈ ರೀತಿ ಹೇಳುವುದು ಸರಿಯಲ್ಲ. ಆದರೆ ನನಗೆ ಇಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ರಾಖಿ ಗಂಭೀರ ಆರೋಪ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…