Featured

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಈವರೆಗೂ ಯಾವುದೇ ಪತ್ರ ಬಂದಿಲ್ಲ : ಪರಮೇಶ್ವರ್‌ – vishwanews24

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಈವರೆಗೂ ಯಾವುದೇ ಪತ್ರ ಬಂದಿಲ್ಲ : ಪರಮೇಶ್ವರ್‌

ಬೆಂಗಳೂರು: ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ , ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ಗೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ.

ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇತ್ತೀಚಿಗೆ ಶಾಸಕ ರವಿ ಗಣಿಗ ಅವರು ರಶ್ಮಿಕಾ ವಿರುದ್ಧ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ. ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ.

 

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

2 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

7 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

7 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

7 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

8 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

8 hours ago