Featured

ನಟಿ ಸಂಜನಾ ಗಲ್ರಾಣಿಗೆ ವಂಚನೆ: ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ FIR ದಾಖಲು – Vishwanews24

ನಟಿ ಸಂಜನಾ ಗಲ್ರಾಣಿಗೆ ವಂಚನೆ: ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು – Vishwanews24

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿಗೆ ಸ್ನೇಹಿತನಿಂದಲೇ ವಂಚನೆಯಾಗಿದ್ದು ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕ್ಯಾಸಿನೊದಲ್ಲಿ ಹಣ ಹೂಡಿಕೆ ಮಾಡುವುದಾಗಿ ರಾಹುಲ್ ಥೋನ್ಸೆ ಸಂಜನಾಗೆ ಕಳೆದ ಮೂರು ವರ್ಷಗಳಿಂದ ಹಣದ ಹೂಡಿಕೆ ವಿಚಾರದಲ್ಲಿ ವಂಚನೆ ಎಸಗಿರುವುದು ಗೊತ್ತಾಗಿದ್ದು ಇಂದಿರಾನಗರ ಪೊಲೀಸರು ರಾಹುಲ್ ಥೋನ್ಸೆ, ರಾಮಕೃಷ್ಣ ಹಾಗೂ ಶ್ರೀಮತಿ ರಾಗೇಶ್ವರಿ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಮೂವರ ವಿರುದ್ಧವೂ ಐಪಿಸಿ ಸೆಕ್ಷನ್ 120 ಬಿ, 107, 354, 406, 420, 506ರ ಅಡಿ ಕೇಸು ದಾಖಲಿಸಲಾಗಿದೆ. ಎಫ್ ಐಆರ್ ಪ್ರತಿ ಮಾಧ್ಯಮಕ್ಕೆ ಲಭ್ಯವಾಗಿದ್ದು, ಅದರಲ್ಲಿ ನಟಿ ಸಂಜನಾಗೆ ಆಗಿರುವ ದೋಖಾ ಮತ್ತು ಹೂಡಿಕೆ ವಿಚಾರದಲ್ಲಿ ಆಗಿರುವ ಅಕ್ರಮ, ವಂಚನೆ ವಿಚಾರವಾಗಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ವಿವರಿಸಲಾಗಿದೆ.

ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಟಿ ಸಂಜನಾ ಅವರ ಹಣವನ್ನು ಹೂಡಿಕೆ ಮಾಡಲಾಗಿದೆ ಎಂಬುದು ಆರೋಪವಾಗಿದೆ. 2018ರ ನವೆಂಬರ್ ನಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ.

ಏನಿದು ಪ್ರಕರಣ?: ರಾಹುಲ್ ಥೋನ್ಸೆ ತಾನು ಗೋವಾ ಮತ್ತು ಕೊಲಂಬೊದಲ್ಲಿ ಕ್ಯಾಸಿನೊಗಳ ಮ್ಯಾನೇಜಿಂಗ್ ಡೈರೆಕ್ಟರ್  ಆಗಿ ಕೆಲಸ ಮಾಡುತ್ತಿದ್ದೆನೆಂದು ಹೇಳಿಕೊಂಡಿದ್ದ.  ಕ್ಯಾಸಿನೊಗಳಲ್ಲಿ  ಹಣ ವಿನಿಯೋಗಿಸಿದರೆ ಹೆಚ್ಚಿನ ಲಾಭಗಳಿಸಬಹುದು ಎಂದು ಆಮಿಷ ಒಡ್ಡಿದ್ದ.  ಹೆಚ್ಚಿನ ಲಾಭದ ಆಸೆಯಿಂದಾಗಿ ಕಳೆದ ಮೂರು ವರ್ಷಗಳಿಂದ ರಾಹುಲ್ ಥೋನ್ಸೆ  ಸೇರಿದಂತೆ ಮೂವರ ಬ್ಯಾಂಕ್ ಖಾತೆಗಳಿಗೆ  ಸಂಜನಾ ಗಲ್ರಾನಿ ಹಣ ಹಾಕಿದ್ದರಂತೆ. ಬಳಿಕ ಯಾವುದೇ ಲಾಭಾಂಶ ನೀಡದೆ, ಹಣ ವಾಪಸ್ ಕೇಳಿದರೂ ಹಿಂದಿರುಗಿಸಿಲ್ಲ ಎಂದು ನಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ದೂರು ದಾಖಲಿಸಲು ನ್ಯಾಯಾಲಯ ಆದೇಶ: ಹೆಚ್ಚಿನ ಲಾಭ ಗಳಿಕೆಗೆ ತಾನು ಕೊಟ್ಟ ಹಣವನ್ನ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ ರಾಹುಲ್ ಥೋನ್ಸೆ ತಮ್ಮ ಘನತೆಗೆ ಧಕ್ಕೆ ತರುವಂತೆ ಮಾಡಿದ್ದಾರೆ ಎಂದು ರಾಹುಲ್ ಥೋನ್ಸೆ ವಿರುದ್ಧ ದೂರು ದಾಖಲಿಸಲು ನ್ಯಾಯಾಲಯದಲ್ಲಿ ಸಂಜನಾ ಪಿಸಿಆರ್ ದಾಖಲಿಸಿದ್ದರು.

ವಿಚಾರಣೆ ನಡೆಸಿದ 4ನೇ ಎಸಿಎಂಎಂ ನ್ಯಾಯಾಲಯದಿಂದ ತನಿಖೆಗೆ ಆದೇಶ‌ ಹೊರಡಿಸಿ, ಇಂದಿರಾನಗರ ಪೊಲೀಸರಿಗೆ ತನಿಖೆ ನಡೆಸುವಂತೆ ಆದೇಶ ನೀಡಿತು. ಕೋರ್ಟ್ ಆದೇಶದಂತೆ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಐಪಿಸಿ 120ಬಿ, 107, 354, 406, 420, 506, ಕಲಂ 34ರ ಅಡಿಯಲ್ಲಿ  ಎಫ್ಐಆರ್  ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago