ನಟೇಶ ನೃತ್ಯ ನಿಕೇತನ ಸಂಸ್ಥೆಯಿಂದ 16 ನೇ ವಾರ್ಷಿಕೋತ್ಸವ. ಪತ್ರಕರ್ತ ವಿಜಯ ಆಚಾರ್ಯ ಸೇರಿದಂತೆ ಸಾಧಕರಿಗೆ ಸನ್ಮಾನ.

ನಟೇಶ ನೃತ್ಯ ನಿಕೇತನ ಸಂಸ್ಥೆಯಿಂದ 16 ನೇ ವಾರ್ಷಿಕೋತ್ಸವ. ಪತ್ರಕರ್ತ ವಿಜಯ ಆಚಾರ್ಯ ಸೇರಿದಂತೆ ಸಾಧಕರಿಗೆ ಸನ್ಮಾನ.ಮಹಾನ್ ಕಲಾವಿದರನ್ನು ಬೆಳಕಿಗೆ ತಂದಿರುವ ನೃತ್ಯವು ಭಾರತೀಯ ಮೂಲ ಕಲೆ – ಶಾಸಕ ಲಾಲಾಜಿ ಮೆಂಡನ್.

ಪಡುಬಿದ್ರಿ: ನಟೇಶ ನೃತ್ಯ ನಿಕೇತನ ಸಂಸ್ಥೆಯ ಮೂಲಕ ಭಾರತದ ಮೂಲ ಕಲೆಯದ ನೃತ್ಯ – ಭರತನಾಟ್ಯದ ಸಾಧಕಿಯಾದ ಮಂಗಳಾ ಕಿಶೋರ್ ದೇವಾಡಿಗ ಅವರಿಗೆ ತಮ್ಮ ಅವಿರತ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಅವಕಾಶದ ಬಾಗಿಲು ತೆರೆದುಕೊಳ್ಳಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಭಿಲಾಷೆ ವ್ಯಕ್ತಪಡಿಸಿದರು.
ಅವರು ಶುಕ್ರವಾರ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆದ ಉಚ್ಚಿಲ ನಟೇಶ ನೃತ್ಯ ನಿಕೇತನ ಸಂಸ್ಥೆಯ 16 ನೇ ವಾರ್ಷಿಕೋತ್ಸವದ ಸಂದರ್ಭ ಮುಖ್ಯಅತಿಥಿಯಾಗಿ ಪಾಲ್ಗೊಂಡು ಸಾಧಕರನ್ನು ಸಮ್ಮಾನಿಸಿ ಮಾತನಾಡಿದರು.
ಈ ನೃತ್ಯ ಕಲೆಯ ಮೂಲಕವೇ ಹಲವಾರು ಮಹಾನ್ ಕಲಾವಿದರು ತಮ್ಮ ಪ್ರತಿಭೆಯನ್ನು ಬೆಳಕಿಗೆ ತಂದು ಗುರುತಿಸಿಕೊಳ್ಳುವಂತೆ ಉತ್ತಮ ನಾಯಕರಾಗಿ(ಸ್ಟಾರ್) ಮೂಡಿ ಬಂದಿರುತ್ತಾರೆ. ಅಂತಹ ನೃತ್ಯ ಕಲೆಯು ಭಾರತೀಯ ಮೂಲ ಕಲೆಯಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಮಾತನಾಡಿ, ಭಾರತೀಯ ಸಂಸ್ಕøತಿಯನ್ನು ನೃತ್ಯ, ಯಕ್ಷಗಾನ, ನಾಟಕ, ಸಂಗೀತ ಕಲೆಗಳು ಉಳಿಸಿಕೊಟ್ಟಿದೆ. ಅಂಗ ಸೌಷ್ಠವ, ಲಾಲಿತ್ಯ ಮನಸ್ಥಿತಿ, ಮನಸ್ಸಿನ ಪ್ರಫುಲ್ಲತೆಗೆ ಕಾರಣವಾಗುವ ನೃತ್ಯ ಕಲೆಯ ಬಗ್ಗೆ ತಾತ್ಸಾರ ಬೇಡ. ಆಪತಪಗಖಳಷ್ಠ ಲಲಿತ ಕಲೆಗಳ ಮೂಲಕ ಭಗವಂತನನನ್ನು ಒಲಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಆರ್ಚಕ ಯು. ಸೀತಾರಾಮ್ ಭಟ್ ಸಮಾರಂಭವನ್ನು ಉದ್ಘಾಟಿಸಿದರು. ನೃತ್ಯ ಗುರು ವಿದುಷಿ ವೀಣಾ ಎಂ. ಸಾಮಗ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಮಾರಂಭದಲ್ಲಿ ನಿವೃತ್ತ ಇಂಡಿಯನ್ ಆರ್ಮಿಯ ಮುತ್ತಯ್ಯ ಮೊಯ್ಲಿ, ವಾದ್ಯ ಸಂಗೀತ ಕ್ಷೇತ್ರದ ಶೇಖರ ಸೇರಿಗಾರ, ಶಿಕ್ಷಣ ಕ್ಷೇತ್ರದ ಸಾಧಕ ನಿವೃತ್ತ ಶಿಕ್ಷಕ ಎಂ. ಗೋಪಾಲಕೃಷ್ಣ ಅಡಿಗ, ವಿಲೇಜ್ ಎಕೌಂಟೆಂಟ್ ಶ್ರೇಯಾ ಕೆ ದೇವಾಡಿಗ ಉಚ್ಚಿಲ, ಯಕ್ಷಗಾನ ಕ್ಷೇತ್ರದ ಸಾಧಕ ಸುರೇಂದ್ರ ಪಿ. ಮುಲ್ಲಗುಡ್ಡೆ, ಪತ್ರಿಕಾರಂಗದ ವೈ ವಿಜಯ ಆಚಾರ್ಯ(ಎ.ವಿ. ಆಚಾರ್ಯ ಉಚ್ಚಿಲ) ಉಚ್ಚಿಲ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದ್ಯುಮಣಿ ಆರ್ ಭಟ್, ಉಡುಪಿ ಜಿಲ್ಲಾ ದೇವಾಡಿಗ ಸಂಘದ ಅಧ್ಯಕ್ಷ ರತ್ನಾಕರ ದೇವಾಡಿಗ, ಸಂಚಾಲಕರುಗಳಾದ ಪ್ರಕಾಶ ದೇವಾಡಿಗ, ಕಿಶೋರ್ ದೇವಾಡಿಗ ವೇದಿಕೆಯಲ್ಲಿದ್ದರು.
ಉಚ್ಚಿಲ ನಟೇಶ ನೃತ್ಯ ನಿಕೇತನದ ನಿರ್ದೇಶಕಿ ನೃತ್ಯ ವಿದುಷಿ ಮಂಗಳಾ ಕಿಶೋರ್ ದೇವಾಡಿಗ ಸ್ವಾಗತಿಸಿ ವಂದಿಸಿದರು. ವಿಜೇಶ್ ದೇವಾಡಿಗ ಸನ್ಮಾನಿತರನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು.

 ವರದಿ:   ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

10 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

12 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

12 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

12 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

12 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

12 hours ago