Featured

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್ – vishwanews24

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್​ ಖದೀಮರ ಜಾಲ ನೋಡಿ ಶಾಕ್​ ಆಗಿದ್ದಾರೆ. 20ರಿಂದ 25 ವಯಸ್ಸಿನ ಯುವಕರು ಈ ದಂಧೆಯಲ್ಲಿ ನಿರತರಾಗಿದ್ದು, ಊರಿನ 150 ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿಗೊಂಡಿರುವ ಆಘಾತಕಾರಿ ವಿಷಯ ಈ ವೇಳೆ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ವಿಕಾಸ್​​ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸೆ.15ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್​ಲೈನ್​ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್​ ಮಾಡಿದ್ದರು. ಈ ವೇಳೆ ಮೊಬೈಲ್​​ಗೆ ಲಿಂಕ್​ ಬಂದಿದ್ದು, ಆ ಲಿಂಕ್​ ಅನ್ನು ಪ್ರಿಯಾಂಕ ಕ್ಲಿಕ್​ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್​ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ 55 ಸಾವಿರ ಹಣ ಕಳುಹಿಸುವಂತೆ ಮೆಸೇಜ್​ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್​ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು.

ಹಣ ಅಗತ್ಯವಿದೆ ಎಂದು ಪ್ರಿಯಾಂಕ ಅವರ ವಾಟ್ಸ್ಯಾಪ್​ನಿಂದ ಆರೋಪಿ ಹಲವರಿಗೆ ಮೆಸೇಜ್​ ಮಾಡಿದ್ದು, ಈ ವೇಳೆ ಪ್ರಿಯಾಂಕಾ ಅವರೇ ಸಂದೇಶ ಕಳುಹಿಸಿದ್ದು ಎಂದು ಕೆಲವರು ಹಣ ಹಾಕಿದ್ದಾರೆ. ಸ್ವತಃ ಉಪೇಂದ್ರ ಪುತ್ರ ಕೂಡ ತಾಯಿ ಅಕೌಂಟ್​ಗೆ ಐವತ್ತು ಸಾವಿರ ಹಣಹಾಕಿದ್ದರು. ಇನ್ನು ಕೆಲವರು ಅನುಮಾನಗೊಂಡು ಪ್ರಿಯಾಂಕಾ ಅವರ ನಂಬರ್​​ಗೆ ಕರೆ ಮಾಡಿದರೆ ಕಾಲ್​ ಕಟ್​​ ಆಗುತ್ತಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸದಾಶಿವನಗರ ಠಾಣೆಗೆ ಈ ಬಗ್ಗೆ ಪ್ರಿಯಾಂಕಾ ದೂರು ನೀಡಿದ್ದರು. ಆದರೆ, ಅದಾಗಲೇ ಸೈಬರ್​ ವಂಚಕನ ಅಕೌಂಟ್​​ಗೆ ಒಂದೂವರೆ ಲಕ್ಷ ರೂಪಾಯಿ ಹಣ ವರ್ಗಾವಣೆ ಆಗಿತ್ತು. ದೂರು ದಾಖಲಾಗುತ್ತಿದ್ದಂತೆ ಅಲರ್ಟ್​ ಆದ ಪೊಲೀಸರು, ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ತನಿಖೆ ವೇಳೆ ಆರೋಪಿ ಬಿಹಾರದ ದಶರತಪುರದ ನಿವಾಸಿ ಎನ್ನುವುದು ಗೊತ್ತಾಗಿತ್ತು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

14 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

15 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

15 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

16 hours ago