Featured

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ:  ಗಲಾಟೆ ಆಗಿದ್ದು ನಿಜ,  ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ:  ನಟ ಚಂದನ್ ಸ್ಪಷ್ಟನೆ – Vishwanews24

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ:  ಗಲಾಟೆ ಆಗಿದ್ದು ನಿಜ,  ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ:  ನಟ ಚಂದನ್ ಸ್ಪಷ್ಟನೆ

ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಗಲಾಟೆಯ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಒಂದು ತಿಂಗಳ ಹಿಂದೆ ನಟ ಚಂದನ್ ಮೇಲೆ ಹಲ್ಲೆ ಮಾಡುವ ಈ ವಿಡಿಯೋ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿ ಬಂದಿದ್ದವು. ಸ್ವತಃ ಚಂದನ್ ಅವರೇ ಧಾರಾವಾಹಿಯ ಕ್ಯಾಮೆರಾಮನ್ ಮತ್ತು ಕ್ಯಾಮೆರಾಮನ್ ಸಹಾಯಕನಿಗೆ ಹೊಡೆದರು, ಆನಂತರ ಸೆಟ್ ನಲ್ಲಿ ಗಲಾಟೆ ನಡೆಯಿತು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದನ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಗಲಾಟೆ ಆಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು ಆದರೆ, ಅಲ್ಲಿ ಹೊಡೆದಾಟ ನಡೆದಿಲ್ಲ. ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ‘ಈ ಘಟನೆ ನಡೆದಾಗ ನನ್ನ ತಾಯಿಯು ಅನಾರೋಗ್ಯದಲ್ಲಿದ್ದರು. ನಾನು ಟೆನ್ಷನ್ ನಲ್ಲಿದ್ದೆ. ಈ ಸಮಯದಲ್ಲಿ ಕ್ಯಾಮೆರಾಮನ್ ಸಹಾಯಕ ನನ್ನ ಸಹಾಯಕನಿಗೆ ಏರು ಧ್ವನಿಯಲ್ಲಿ ಮಾತನಾಡಿದ್ದ. ನಾನು ಆ ಹುಡುಗನಿಗೆ ಹಾಗೆ ಮಾತನಾಡುವುದು ತಪ್ಪು ಎಂದು ತಳ್ಳಿದ್ದೆ. ಇದರ ಹೊರತಾಗಿ ಅಲ್ಲಿ ಏನೂ ನಡೆದಿಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ವಿಡಿಯೋದಲ್ಲಿ ಇರುವುದು ಬೇರೆಯಾಗಿದೆ. ಶೂಟಿಂಗ್ ಸ್ಥಗಿತಗೊಳಿಸಿ ಚಂದನ್ ಅವರನ್ನು ಸುತ್ತುವರೆದಿದ್ದಾರೆ. ವಾತಾವರಣ ಬಿಸಿಯಾಗಿದೆ. ಚಂದನ್ ಮತ್ತು ಅಲ್ಲಿ ನೆರೆದಿದ್ದವರ ಮಧ್ಯ ಮಾತಿನ ಚಕಮಕಿ ಕೂಡ ನಡೆದಿದೆ. ಕ್ಷಮೆ ಕೇಳಲು ಕೆಲವರು ಚಂದನ್ ಅವರನ್ನು ಒತ್ತಾಯಿಸುತ್ತಾರೆ. ಈ ಮಧ್ಯೆ ಅಲ್ಲಿ ನಿಂತದ್ದ ಒಬ್ಬನು ಚಂದನ್ ಅವರ ಮುಖಕ್ಕೆ ಹೊಡೆಯುತ್ತಾನೆ. ಇಷ್ಟೆಲ್ಲ ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

5 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago