ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಗಲಾಟೆಯ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಒಂದು ತಿಂಗಳ ಹಿಂದೆ ನಟ ಚಂದನ್ ಮೇಲೆ ಹಲ್ಲೆ ಮಾಡುವ ಈ ವಿಡಿಯೋ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿ ಬಂದಿದ್ದವು. ಸ್ವತಃ ಚಂದನ್ ಅವರೇ ಧಾರಾವಾಹಿಯ ಕ್ಯಾಮೆರಾಮನ್ ಮತ್ತು ಕ್ಯಾಮೆರಾಮನ್ ಸಹಾಯಕನಿಗೆ ಹೊಡೆದರು, ಆನಂತರ ಸೆಟ್ ನಲ್ಲಿ ಗಲಾಟೆ ನಡೆಯಿತು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದನ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
ಗಲಾಟೆ ಆಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು ಆದರೆ, ಅಲ್ಲಿ ಹೊಡೆದಾಟ ನಡೆದಿಲ್ಲ. ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ‘ಈ ಘಟನೆ ನಡೆದಾಗ ನನ್ನ ತಾಯಿಯು ಅನಾರೋಗ್ಯದಲ್ಲಿದ್ದರು. ನಾನು ಟೆನ್ಷನ್ ನಲ್ಲಿದ್ದೆ. ಈ ಸಮಯದಲ್ಲಿ ಕ್ಯಾಮೆರಾಮನ್ ಸಹಾಯಕ ನನ್ನ ಸಹಾಯಕನಿಗೆ ಏರು ಧ್ವನಿಯಲ್ಲಿ ಮಾತನಾಡಿದ್ದ. ನಾನು ಆ ಹುಡುಗನಿಗೆ ಹಾಗೆ ಮಾತನಾಡುವುದು ತಪ್ಪು ಎಂದು ತಳ್ಳಿದ್ದೆ. ಇದರ ಹೊರತಾಗಿ ಅಲ್ಲಿ ಏನೂ ನಡೆದಿಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.
ವಿಡಿಯೋದಲ್ಲಿ ಇರುವುದು ಬೇರೆಯಾಗಿದೆ. ಶೂಟಿಂಗ್ ಸ್ಥಗಿತಗೊಳಿಸಿ ಚಂದನ್ ಅವರನ್ನು ಸುತ್ತುವರೆದಿದ್ದಾರೆ. ವಾತಾವರಣ ಬಿಸಿಯಾಗಿದೆ. ಚಂದನ್ ಮತ್ತು ಅಲ್ಲಿ ನೆರೆದಿದ್ದವರ ಮಧ್ಯ ಮಾತಿನ ಚಕಮಕಿ ಕೂಡ ನಡೆದಿದೆ. ಕ್ಷಮೆ ಕೇಳಲು ಕೆಲವರು ಚಂದನ್ ಅವರನ್ನು ಒತ್ತಾಯಿಸುತ್ತಾರೆ. ಈ ಮಧ್ಯೆ ಅಲ್ಲಿ ನಿಂತದ್ದ ಒಬ್ಬನು ಚಂದನ್ ಅವರ ಮುಖಕ್ಕೆ ಹೊಡೆಯುತ್ತಾನೆ. ಇಷ್ಟೆಲ್ಲ ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…