Featured

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ:  ಗಲಾಟೆ ಆಗಿದ್ದು ನಿಜ,  ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ:  ನಟ ಚಂದನ್ ಸ್ಪಷ್ಟನೆ – Vishwanews24

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ:  ಗಲಾಟೆ ಆಗಿದ್ದು ನಿಜ,  ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ:  ನಟ ಚಂದನ್ ಸ್ಪಷ್ಟನೆ

ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಗಲಾಟೆಯ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಒಂದು ತಿಂಗಳ ಹಿಂದೆ ನಟ ಚಂದನ್ ಮೇಲೆ ಹಲ್ಲೆ ಮಾಡುವ ಈ ವಿಡಿಯೋ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿ ಬಂದಿದ್ದವು. ಸ್ವತಃ ಚಂದನ್ ಅವರೇ ಧಾರಾವಾಹಿಯ ಕ್ಯಾಮೆರಾಮನ್ ಮತ್ತು ಕ್ಯಾಮೆರಾಮನ್ ಸಹಾಯಕನಿಗೆ ಹೊಡೆದರು, ಆನಂತರ ಸೆಟ್ ನಲ್ಲಿ ಗಲಾಟೆ ನಡೆಯಿತು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದನ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಗಲಾಟೆ ಆಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು ಆದರೆ, ಅಲ್ಲಿ ಹೊಡೆದಾಟ ನಡೆದಿಲ್ಲ. ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ‘ಈ ಘಟನೆ ನಡೆದಾಗ ನನ್ನ ತಾಯಿಯು ಅನಾರೋಗ್ಯದಲ್ಲಿದ್ದರು. ನಾನು ಟೆನ್ಷನ್ ನಲ್ಲಿದ್ದೆ. ಈ ಸಮಯದಲ್ಲಿ ಕ್ಯಾಮೆರಾಮನ್ ಸಹಾಯಕ ನನ್ನ ಸಹಾಯಕನಿಗೆ ಏರು ಧ್ವನಿಯಲ್ಲಿ ಮಾತನಾಡಿದ್ದ. ನಾನು ಆ ಹುಡುಗನಿಗೆ ಹಾಗೆ ಮಾತನಾಡುವುದು ತಪ್ಪು ಎಂದು ತಳ್ಳಿದ್ದೆ. ಇದರ ಹೊರತಾಗಿ ಅಲ್ಲಿ ಏನೂ ನಡೆದಿಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ವಿಡಿಯೋದಲ್ಲಿ ಇರುವುದು ಬೇರೆಯಾಗಿದೆ. ಶೂಟಿಂಗ್ ಸ್ಥಗಿತಗೊಳಿಸಿ ಚಂದನ್ ಅವರನ್ನು ಸುತ್ತುವರೆದಿದ್ದಾರೆ. ವಾತಾವರಣ ಬಿಸಿಯಾಗಿದೆ. ಚಂದನ್ ಮತ್ತು ಅಲ್ಲಿ ನೆರೆದಿದ್ದವರ ಮಧ್ಯ ಮಾತಿನ ಚಕಮಕಿ ಕೂಡ ನಡೆದಿದೆ. ಕ್ಷಮೆ ಕೇಳಲು ಕೆಲವರು ಚಂದನ್ ಅವರನ್ನು ಒತ್ತಾಯಿಸುತ್ತಾರೆ. ಈ ಮಧ್ಯೆ ಅಲ್ಲಿ ನಿಂತದ್ದ ಒಬ್ಬನು ಚಂದನ್ ಅವರ ಮುಖಕ್ಕೆ ಹೊಡೆಯುತ್ತಾನೆ. ಇಷ್ಟೆಲ್ಲ ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

28 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

37 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

53 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

1 hour ago