ಮೈಸೂರು : ನಟ ದರ್ಶನ್ ಅವರ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿದ ಆರೋಪದಲ್ಲಿ ಬ್ಯಾಂಕ್ ನಕಲಿ ಮಹಿಳಾ ಅಧಿಕಾರಿ ಸೇರಿ ಮೂರು ಮಂದಿಯನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ದರ್ಶನ್ ಅವರ ಆಸ್ತಿ ಪತ್ರ ಮತ್ತು ಸಹಿಯನ್ನು ಫೋರ್ಜರಿ ಮಾಡಿ, ಬ್ಯಾಂಕಿನಲ್ಲಿ ರೂ.25 ಕೋಟಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಸೃಷ್ಟಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಟ ದರ್ಶನ್ ಅವರು ಭಾನುವಾರ ತಮ್ಮ ಸ್ನೇಹಿತರಾದ ದೂರುದಾರ ಹರ್ಷ ಮಲೆಂಟಾ, ನಿರ್ಮಾಪಕ ಉಮಾಪತಿ ಹಾಗೂ ಇತರರೊಂದಿಗೆ ಮೈಸೂರಿನ ಎನ್.ಆರ್.ಉಪ ವಿಭಾಗದ ಎಸಿಪಿ ಕಚೇರಿಗೆ ಖುದ್ದು ಹಾಜರಾಗಿದ್ದರು ಎನ್ನಲಾಗಿದೆ.
ನಿರ್ಮಾಪಕ ಉಮಾಪತಿ ಅವರು ಜೂನ್.16ರಂದು ಹರ್ಷ ಮಲೆಂಟಾಗೆ ಕರೆ ಮಾಡಿ ಕೆನರಾ ಬ್ಯಾಂಕಿನ ಮಾನ್ಯೇಜರ್ ಅರುಣಕುಮಾರಿ ನನಗೆ ಸಿಕ್ಕಿದ್ದು, ನೀನು ರೂ.25 ಕೋಟಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೀಯಾ? ಅದರ ಭದ್ರತೆಗಾಗಿ ನಿನ್ನ ಆಸ್ತಿ ಮತ್ತು ದರ್ಶನ್ ಆಸ್ತಿ ಪತ್ರಗಳನ್ನು ನಕಲು ಮಾಡಿ ಸಲ್ಲಿಸಿದ್ದೀಯಾ ಎಂದು ಕೇಳಿದ್ದು, ಗಾಬರಿಯಾದ ಹರ್ಷ ಬ್ಯಾಂಕಿನ ಅಧಿಕಾರಿಗೆ ಕರೆ ಮಾಡಿ ವಿಚಾರಿಸಿದಾಗ ಅದೇ ದಿನ ಅರುಣಕುಮಾರಿ, ಮಧುಕೇಶವ ಮತ್ತು ನಂದೀಶ ಎಂಬುವವರೊಂದಿಗೆ ಮೈಸೂರಿಗೆ ಬಂದು, ಕೆಲವು ಆಸ್ತಿಪತ್ರಗಳ ಜೆರಾಕ್ಸ್ ಪ್ರತಿಯನ್ನು ಹರ್ಷ ಮಲೆಂಟಾ ಅವರಿಗೆ ತೋರಿಸಿ ನೀವು ಗಣ್ಯವ್ಯಕ್ತಿಯೊಬ್ಬರ ಆಸ್ತಿಪತ್ರ ಫೋರ್ಜರಿ ಮಾಡಿದ್ದು, ಅದನ್ನು ಮಾಧ್ಯಮಗಳ ಮುಂದೆ ಹೇಳುವುದಾಗಿ ಬೆದರಿಸಿ ರೂ.25 ಲಕ್ಷಕ್ಕಾಗಿ ಬೇಡಿಕೆ ಇರಿಸಿ ಹೊರಟಿದ್ದಾರೆ.
ಇನ್ನು ಜೂನ್.17ರಂದು ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಬಂದಿದ್ದ ಮಹಿಳೆ ನಕಲಿ ಬ್ಯಾಂಕ್ ಮ್ಯಾನೇಜರ್ ಎಂಬುದು ದೃಢಪಟ್ಟಿದ್ದು, ಜುಲೈ 3ರಂದು ಹರ್ಷ ಮಾಲೆಂಟಾ ಅವರು ಮೈಸೂರಿನ ಹೆಬ್ಬಾಳ ಠಾಣೆಯಲ್ಲಿ ಅರುಣಕುಮಾರಿ, ಮಧುಕೇಶವ ಮತ್ತು ನಂದೀಶ ಎಂಬುವವರ ವಿರುದ್ಧ ದೂರು ನೀಡಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ದರ್ಶನ್, ನನ್ನ ಆಸ್ತಿ ಪತ್ರಗಳು ಫೋರ್ಜರಿ ಆಗಿರುವ ವಿಚಾರ 1 ತಿಂಗಳ ಹಿಂದೆ ತಿಳಿದಿತ್ತು. ಬಂಧಿತ ಆರೋಪಿ ಬಾಯಿ ಬಿಟ್ಟರೆ ಎಲ್ಲವೂ ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…