Featured

ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ  ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ : ಕಮಿಷನರ್ ಬಿ.ದಯಾನಂದ – vishwanews24

ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ  ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ : ಕಮಿಷನರ್ ಬಿ.ದಯಾನಂದ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಇತ್ತೀಚಿಗೆ ನಟ ದರ್ಶನ್ ಬಳ್ಳಾರಿ ಜೈಲಿಂದ ಬಿಡುಗಡೆಯಾಗಿದ್ದರು.ಇದೀಗ ಪೊಲೀಸರು ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪಿ ದರ್ಶನ್ಗೆ ಜಾಮೀನು ಮಂಜೂರು ವಿಚಾರವಾಗಿ ದರ್ಶನ್ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನ ವಿಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮೇಲ್ಮನವಿ ಸಲ್ಲಿಸಲು ಈಗಾಗಲೇ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಕನ್ನಡದಲ್ಲಿರುವ ಮಾಹಿತಿಯನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ನಟ ದರ್ಶನ್ ಎರಡು ದಿನ ಪತ್ನಿ ಮಗ ಹಾಗೂ ಕುಟುಂಬದ ಜೊತೆಗೆ ಕಾಲ ಕಳೆದರು. ನಂತರ ನೇರವಾಗಿ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೈಕೋರ್ಟಿನ ಷರತ್ತಿನ ಮೇರೆಗೆ ಒಂದು ವಾರದಲ್ಲಿ ನಟ ದರ್ಶನ್ ಅವರ ವೈದ್ಯಕೀಯ ವರದಿ ಹೈಕೋರ್ಟಿಗೆ ನಟ ದರ್ಶನ್ ಅವರ ಪರ ವಕೀಲರು ಸಲ್ಲಿಸಿದ್ದಾರೆ. ಇದೀಗ ನಟ ದರ್ಶನ್ ಬಿಡುಗಡೆಯಾದರೂ ಕೂಡ ನೆಮ್ಮದಿ ಇಲ್ಲದಂತಾಗಿದ್ದು, ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

5 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

10 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

16 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

22 minutes ago

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

19 hours ago