ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ ನಟಿ ಹೇಮಾ ಮಾಲಿನಿ ಪತಿಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರ ನೀಡಿದ ಆರು ದಶಕಗಳ ಕೊಡುಗೆಯನ್ನು ಗೌರವಿಸಿ ಈ ಪ್ರಶಸ್ತಿ ನೀಡಲಾಗಿದೆ.
ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಹೇಮಾ ಮಾಲಿನಿ ಗುಲಾಬಿ ಬಣ್ಣದ ಸೀರೆಯಲ್ಲಿ ಗಮನ ಸೆಳೆದರು. ಇದೇ ವೇಳೆ ಪುತ್ರಿ ಅಹಾನಾ ಡಿಯೋಲ್ ಭಾವುಕರಾಗಿ ಕಣ್ಣೀರಿಟ್ಟ ದೃಶ್ಯ ಎಲ್ಲರ ಗಮನ ಸೆಳೆಯಿತು.
ಇದನ್ನೂ ಓದಿ:
ಸಮಾರಂಭಕ್ಕೂ ಮುನ್ನ ಮಾತನಾಡಿದ ಹೇಮಾ ಮಾಲಿನಿ, ಧರ್ಮೇಂದ್ರ ಅವರಿಗೆ ಈ ಗೌರವ ಬಹಳ ಹಿಂದೆಯೇ ಸಿಗಬೇಕಿತ್ತು. ಆದರೂ ಈಗ ಸಿಕ್ಕಿರುವುದು ಸಂತೋಷದ ವಿಚಾರ. ಧರ್ಮೇಂದ್ರ ಕೇವಲ ನಟರಲ್ಲ, ಅವರು ಭಾರತೀಯ ಸಿನಿಮಾದ ಒಂದು ಸಂಸ್ಥೆ. ಅವರ ಸರಳತೆ, ಅಭಿನಯ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳು ಜನರ ಮನಸ್ಸು ತಲುಪಿವೆ ಎಂದು ಭಾವುಕರಾಗಿ ಹೇಳಿದರು.
ಚಿತ್ರರಂಗದ ಹೊರತಾಗಿಯೂ ಧರ್ಮೇಂದ್ರ ದೇಶದ ಭಾವನೆ, ಸಂಸ್ಕೃತಿ ಮತ್ತು ಮಾನವೀಯತೆಯ ಪ್ರತೀಕವಾಗಿದ್ದರು ಎಂದು ಅವರು ಹೇಳಿದರು. ಅವರ ಜೊತೆ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶ ನನಗೆ ಸಿಕ್ಕಿತ್ತು. ನಂತರ ನಾನು ಅವರ ಜೀವನ ಸಂಗಾತಿಯಾಗಿದ್ದೇ ನನ್ನ ಭಾಗ್ಯ ಎಂದರು.
ಇದನ್ನೂ ಓದಿ:
ಧಮೇಂದ್ರ ಮತ್ತು ಹೇಮಾ ಮಾಲಿನಿ 1980ರ ಮೇ 2ರಂದು ವಿವಾಹವಾಗಿದ್ದರು. ಧರ್ಮೇಂದ್ರ ಅವರು 2025ರ ನವೆಂಬರ್ 24ರಂದು ಮುಂಬೈನ ನಿವಾಸದಲ್ಲಿ ನಿಧನರಾದರು
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…