Featured

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ

ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ  ನಟಿ ಹೇಮಾ ಮಾಲಿನಿ ಪತಿಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರ ನೀಡಿದ ಆರು ದಶಕಗಳ ಕೊಡುಗೆಯನ್ನು ಗೌರವಿಸಿ ಈ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಹೇಮಾ ಮಾಲಿನಿ ಗುಲಾಬಿ ಬಣ್ಣದ ಸೀರೆಯಲ್ಲಿ ಗಮನ ಸೆಳೆದರು. ಇದೇ ವೇಳೆ ಪುತ್ರಿ ಅಹಾನಾ ಡಿಯೋಲ್ ಭಾವುಕರಾಗಿ ಕಣ್ಣೀರಿಟ್ಟ ದೃಶ್ಯ ಎಲ್ಲರ ಗಮನ ಸೆಳೆಯಿತು.

ಇದನ್ನೂ ಓದಿ:

ಸಮಾರಂಭಕ್ಕೂ ಮುನ್ನ ಮಾತನಾಡಿದ ಹೇಮಾ ಮಾಲಿನಿ, ಧರ್ಮೇಂದ್ರ ಅವರಿಗೆ ಈ ಗೌರವ ಬಹಳ ಹಿಂದೆಯೇ ಸಿಗಬೇಕಿತ್ತು. ಆದರೂ ಈಗ ಸಿಕ್ಕಿರುವುದು ಸಂತೋಷದ ವಿಚಾರ. ಧರ್ಮೇಂದ್ರ ಕೇವಲ ನಟರಲ್ಲ, ಅವರು ಭಾರತೀಯ ಸಿನಿಮಾದ ಒಂದು ಸಂಸ್ಥೆ. ಅವರ ಸರಳತೆ, ಅಭಿನಯ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳು ಜನರ ಮನಸ್ಸು ತಲುಪಿವೆ ಎಂದು ಭಾವುಕರಾಗಿ ಹೇಳಿದರು.

ಚಿತ್ರರಂಗದ ಹೊರತಾಗಿಯೂ ಧರ್ಮೇಂದ್ರ ದೇಶದ ಭಾವನೆ, ಸಂಸ್ಕೃತಿ ಮತ್ತು ಮಾನವೀಯತೆಯ ಪ್ರತೀಕವಾಗಿದ್ದರು ಎಂದು ಅವರು ಹೇಳಿದರು. ಅವರ ಜೊತೆ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶ ನನಗೆ ಸಿಕ್ಕಿತ್ತು. ನಂತರ ನಾನು ಅವರ ಜೀವನ ಸಂಗಾತಿಯಾಗಿದ್ದೇ ನನ್ನ ಭಾಗ್ಯ ಎಂದರು.

ಇದನ್ನೂ ಓದಿ:

ಧಮೇಂದ್ರ ಮತ್ತು ಹೇಮಾ ಮಾಲಿನಿ 1980ರ ಮೇ 2ರಂದು ವಿವಾಹವಾಗಿದ್ದರು. ಧರ್ಮೇಂದ್ರ ಅವರು 2025ರ ನವೆಂಬರ್ 24ರಂದು ಮುಂಬೈನ ನಿವಾಸದಲ್ಲಿ ನಿಧನರಾದರು

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago