Featured

ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್​ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್- Vishwanews24

ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್​ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್- Vishwanews24

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ನೀಡಿದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸ್ವೀಕರಿಸಿದರು.

ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್​ನಲ್ಲಿ ಮಂಗಳವಾರ ಘಟಿಕೋತ್ಸವ ಸಮಾರಂಭ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಡಾ.ರಾಜ್​ಕುಮಾರ್ ಕುಟುಂಬಸ್ಥರು ಆಗಮಿಸಿದರು.

ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್​ನಲ್ಲಿ ಮಂಗಳವಾರ ಘಟಿಕೋತ್ಸವ ಸಮಾರಂಭ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಡಾ.ರಾಜ್​ಕುಮಾರ್ ಕುಟುಂಬಸ್ಥರು ಆಗಮಿಸಿದರು. ನಟ ರಾಘವೇಂದ್ರ ರಾಜ್​ಕುಮಾರ್ ಮತ್ತು ಪತ್ನಿ, ನಟ ವಿನಯ್ ರಾಜ್​ಕುಮಾರ್, ಪುನೀತ್​ರ ಅಕ್ಕ ಲಕ್ಷ್ಮೀ ಗೋವಿಂದು ಮತ್ತು ಮೊಮ್ಮಕ್ಕಳು ಉಪಸ್ಥಿತರಿದ್ದರು.

ಇತ್ತೀಚೆಗೆ ಅಶ್ವಿನಿ ಅವರನ್ನು ಭೇಟಿಯಾಗಿದ್ದ ಕುಲಪತಿ ಪ್ರೊ.ಹೇಮಂತ್ ಕುಮಾರ್​ ನೇತೃತ್ವದ ನಿಯೋಗ, ಪುನೀತ್​ ಅವರಿಗೆ ಗೌರವ ಡಾಕ್ಟರೇಟ್ ಕೊಡುವ ​ಬಗ್ಗೆ ಚರ್ಚಿಸಿತ್ತು. ಶತಮಾನೋತ್ಸವ ಪೂರೈಸಿರುವ ಮೈಸೂರು ವಿವಿಯು ಈ ಬಾರೀ ಅಪ್ಪು ಅವರಿಗೆ ಡಾಕ್ಟರೇಟ್ ಪದವಿ ಕೊಟ್ಟದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಪುನೀತ್​ ರಾಜ್​ಕುಮಾರ್(ಮರಣೋತ್ತರ), ​ವಿಜ್ಞಾನಿ ಡಾ.ವಿ.ಕೆ.ಆತ್ರಿ ಮತ್ತು ಜಾನಪದ ಕಲಾವಿದ ಎಂ.ಮಹದೇವಸ್ವಾಮಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

 

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

13 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

14 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

14 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

15 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

15 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

15 hours ago