ಮಂಗಳೂರು: ಉದಯೋನ್ಮುಖ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ.
ದುರ್ಗಾಪರಮೇಶ್ವರಿ ಮಹಿಳಾ ಸಂಘದಲ್ಲಿ ತೊಡಗಿಸಿಕೊಂಡಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…