Featured

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24

ಬೆಂಗಳೂರು: ಬೈಕ್ ಅಪಘಾತದಲ್ಲಿ ನಿಧನರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.

ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ಯುಎಸ್ ಅಂಡ್ ಚೆನ್ನೈ ಖಾತೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ‘ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi (ಲೈಂಗಿಕ ಅಲ್ಪಸಂಖ್ಯಾತರು) ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು’ ಎಂದು ಟ್ವೀಟ್ ಮಾಡಿದೆ.

ಇನ್ನು ಈ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ.. ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago