Featured

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24

ನಟ ಸಂಚಾರಿ ವಿಜಯ್ ನಿಧನಕ್ಕೆ  ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ -Vishwanews24

ಬೆಂಗಳೂರು: ಬೈಕ್ ಅಪಘಾತದಲ್ಲಿ ನಿಧನರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.

ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ಯುಎಸ್ ಅಂಡ್ ಚೆನ್ನೈ ಖಾತೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ‘ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi (ಲೈಂಗಿಕ ಅಲ್ಪಸಂಖ್ಯಾತರು) ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು’ ಎಂದು ಟ್ವೀಟ್ ಮಾಡಿದೆ.

ಇನ್ನು ಈ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ.. ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago