ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.
ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ.
ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದ್ದು, ಸ್ನೇಹಿತರು ಕುಟುಂಬಸ್ಥರು ನನ್ನ ಜೊತೆಗಿದ್ದಾರೆ. ಹೀಗಾಗಿ ನನ್ನ ಆತ್ಮೀಯರು ಏನೂ ಯೋಚನೆ ಮಾಡಬೇಡಿ. ಅಲ್ಲದೆ ವದಂತಿಗಳನ್ನು ಕೂಡ ನಂಬಬೇಡಿ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಅತೀ ಶೀಘ್ರವೇ ಹುಷಾರಾಗಿ ನಿಮ್ಮ ಮುಂದೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನಟನ ಆಪ್ತರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನಟರಿಗೆ ಕ್ಯಾನ್ಸರ್ ತುಂಬಾನೇ ಜೋರಾಗಿದೆ. ಪತ್ನಿ ಹಾಗೂ ಪುಟ್ಟ ಮಕ್ಕಳು ದುಬೈನಲ್ಲಿದ್ದು, ಮಕ್ಕಳ ಬಗ್ಗೆ ನಟ ಚಿಂತೆಗೀಡಾಗಿದ್ದಾರೆ. ಸದ್ಯ ಸಂಜಯ್ ಅವರಿಗೆ ತಕ್ಷಣವೇ ಚಿಕಿತ್ಸೆಯ ಅಗತ್ಯತೆ ಇದೆ. ಹೀಗಾಗಿ ಅವರು ಅಮೆರಿಕಕ್ಕೆ ತೆರಳುತ್ತಾರೆ ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…