ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.
ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ.
ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದ್ದು, ಸ್ನೇಹಿತರು ಕುಟುಂಬಸ್ಥರು ನನ್ನ ಜೊತೆಗಿದ್ದಾರೆ. ಹೀಗಾಗಿ ನನ್ನ ಆತ್ಮೀಯರು ಏನೂ ಯೋಚನೆ ಮಾಡಬೇಡಿ. ಅಲ್ಲದೆ ವದಂತಿಗಳನ್ನು ಕೂಡ ನಂಬಬೇಡಿ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಅತೀ ಶೀಘ್ರವೇ ಹುಷಾರಾಗಿ ನಿಮ್ಮ ಮುಂದೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನಟನ ಆಪ್ತರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನಟರಿಗೆ ಕ್ಯಾನ್ಸರ್ ತುಂಬಾನೇ ಜೋರಾಗಿದೆ. ಪತ್ನಿ ಹಾಗೂ ಪುಟ್ಟ ಮಕ್ಕಳು ದುಬೈನಲ್ಲಿದ್ದು, ಮಕ್ಕಳ ಬಗ್ಗೆ ನಟ ಚಿಂತೆಗೀಡಾಗಿದ್ದಾರೆ. ಸದ್ಯ ಸಂಜಯ್ ಅವರಿಗೆ ತಕ್ಷಣವೇ ಚಿಕಿತ್ಸೆಯ ಅಗತ್ಯತೆ ಇದೆ. ಹೀಗಾಗಿ ಅವರು ಅಮೆರಿಕಕ್ಕೆ ತೆರಳುತ್ತಾರೆ ಎಂದು ತಿಳಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…