ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.
ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ.
ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ನನಗೆ ಚಿಕಿತ್ಸೆ ಮಾಡಿಸಿಕೊಳ್ಳಬೇಕಿದ್ದು, ಸ್ನೇಹಿತರು ಕುಟುಂಬಸ್ಥರು ನನ್ನ ಜೊತೆಗಿದ್ದಾರೆ. ಹೀಗಾಗಿ ನನ್ನ ಆತ್ಮೀಯರು ಏನೂ ಯೋಚನೆ ಮಾಡಬೇಡಿ. ಅಲ್ಲದೆ ವದಂತಿಗಳನ್ನು ಕೂಡ ನಂಬಬೇಡಿ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಅತೀ ಶೀಘ್ರವೇ ಹುಷಾರಾಗಿ ನಿಮ್ಮ ಮುಂದೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನಟನ ಆಪ್ತರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ನಟರಿಗೆ ಕ್ಯಾನ್ಸರ್ ತುಂಬಾನೇ ಜೋರಾಗಿದೆ. ಪತ್ನಿ ಹಾಗೂ ಪುಟ್ಟ ಮಕ್ಕಳು ದುಬೈನಲ್ಲಿದ್ದು, ಮಕ್ಕಳ ಬಗ್ಗೆ ನಟ ಚಿಂತೆಗೀಡಾಗಿದ್ದಾರೆ. ಸದ್ಯ ಸಂಜಯ್ ಅವರಿಗೆ ತಕ್ಷಣವೇ ಚಿಕಿತ್ಸೆಯ ಅಗತ್ಯತೆ ಇದೆ. ಹೀಗಾಗಿ ಅವರು ಅಮೆರಿಕಕ್ಕೆ ತೆರಳುತ್ತಾರೆ ಎಂದು ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…