ನಟ ಸುಶಾಂತ್‌ ಸಿಂಗ್ ಸಾವಿನ ಪ್ರಕರಣ : ರಿಯಾ ಚಕ್ರವರ್ತಿ ವಿರುದ್ಧ ಸಿಬಿಐನಿಂದ ಎಫ್‌ಐಆರ್ ದಾಖಲು -Vishwanews24

ಮುಂಬೈ: ನಟ ಸುಶಾಂತ್‌ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ಸುಶಾಂತ್‌ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ಬಿಹಾರ ಸರ್ಕಾರದ ಶಿಫಾರಸನ್ನು ಒಪ್ಪಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿತ್ತು.

ಈ ಪ್ರಕರಣವು ಸಿಬಿಐಗೆ ವರ್ಗಾವಣೆಯಾದ ಮರುದಿನವೇ ರಿಯಾ ಚಕ್ರವರ್ತಿ, ಇಂದ್ರಜಿತ್ ಚಕ್ರವರ್ತಿ, ಸಂಧ್ಯಾ ಚಕ್ರವರ್ತಿ, ಶೋಯಿಕ್ ಚಕ್ರವರ್ತಿ, ಸ್ಯಾಮ್ಯುಯೆಲ್ ಮಿರಾಂದಾ, ಶ್ರುತಿ ಮೋದಿ ಮತ್ತು ಇತರರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

ರಿಯಾ ಚಕ್ರವರ್ತಿ ಹಣಕಾಸು ವಿಚಾರದಲ್ಲಿ ಸುಶಾಂತ್‌ಗೆ ಮೋಸ ಮಾಡಿದ್ದಾರೆ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಕಾರಣಕ್ಕೆ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್‌ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಪಟ್ನಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಅರ್ಜಿ ಸಲ್ಲಿಸಿದ್ದರು.

ರಿಯಾ ಚಕ್ರವರ್ತಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮೂರು ದಿನಗಳೊಳಗೆ ಅಭಿಪ್ರಾಯ ತಿಳಿಸುವಂತೆ ಸುಶಾಂತ್‌ ಅವರ ತಂದೆ ಕೃಷ್ಣ ಕಿಶೋರ್‌ ಸಿಂಗ್‌, ಮಹಾರಾಷ್ಟ್ರ ಹಾಗೂ ಬಿಹಾರ ಸರ್ಕಾರಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ. ಸುಶಾಂತ್‌ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಆಗಿರುವ ಪ್ರಗತಿ ಕುರಿತ ವರದಿಯನ್ನು ಸಲ್ಲಿಸುವಂತೆ ಮಹಾರಾಷ್ಟ್ರ ಪೊಲೀಸ್‌ಗೆ ಸೂಚಿಸಿದೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago