ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಏಪ್ರಿಲ್ 1, 1908ರಲ್ಲಿ ಮಾಗಡಿ ತಾಲೂಕಿನ ವೀರಾಪುರದಲ್ಲಿ ಶಿವಕುಮಾರ ಸ್ವಾಮೀಜಿ ಜನಿಸಿದ್ದರು. ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಗೆ ಜನಿಸಿದ ಇವರ ಬಾಲ್ಯದ ಹೆಸರು ಶಿವಣ್ಣ ಆಗಿತ್ತು. ಮರಳಿನ ಮೇಲೆ ಅಕ್ಷರ ಬರೆಯುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭಗೊಂಡಿತ್ತು. ಪ್ರಾಥಮಿಕ ಶಾಲಾ ದಿನಗಳಲ್ಲೇ ತಾಯಿ ಕಳೆದುಕೊಂಡ ಶಿವಣ್ಣ, ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢ ಶಿಕ್ಷಣ, 1926ರಲ್ಲಿ ಮೆಟ್ರಿಕ್ಯುಲೇಷನ್ ಪೂರ್ಣ ಬಳಿಕ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಓದಿದ್ದರು.
1930ರ ನವೆಂಬರ್ 11 ರಂದು ಸಿದ್ದಗಂಗಾ ಮಠದ ಶ್ರೀ ಮರುಳಾರಾಧ್ಯ ಸ್ವಾಮಿಗಳವರ ಸಮಾಧಿ ಕ್ರಿಯೆಗೆ ಬಂದಾಗ ಶ್ರೀ ಉದ್ದಾನ ಶಿವಯೋಗಿಗಳವರ ಕೃಪಾದೃಷ್ಟಿಗೆ ಒಳಗಾಗಿದ್ದರು. ಬಳಿಕ 1930ರ ಮಾ.3ರಂದು ಸಿದ್ದಗಂಗಾ ಕ್ಷೇತ್ರದ ಉತ್ತರಾಧಿಕಾರಿಯಾಗಿ ಉದ್ದಾನ ಶ್ರೀಗಳು ಶಿವಣ್ಣ ಅವರನ್ನು ಆಯ್ಕೆ ಮಾಡಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…