ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಏಪ್ರಿಲ್ 1, 1908ರಲ್ಲಿ ಮಾಗಡಿ ತಾಲೂಕಿನ ವೀರಾಪುರದಲ್ಲಿ ಶಿವಕುಮಾರ ಸ್ವಾಮೀಜಿ ಜನಿಸಿದ್ದರು. ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಗೆ ಜನಿಸಿದ ಇವರ ಬಾಲ್ಯದ ಹೆಸರು ಶಿವಣ್ಣ ಆಗಿತ್ತು. ಮರಳಿನ ಮೇಲೆ ಅಕ್ಷರ ಬರೆಯುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭಗೊಂಡಿತ್ತು. ಪ್ರಾಥಮಿಕ ಶಾಲಾ ದಿನಗಳಲ್ಲೇ ತಾಯಿ ಕಳೆದುಕೊಂಡ ಶಿವಣ್ಣ, ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢ ಶಿಕ್ಷಣ, 1926ರಲ್ಲಿ ಮೆಟ್ರಿಕ್ಯುಲೇಷನ್ ಪೂರ್ಣ ಬಳಿಕ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಓದಿದ್ದರು.
1930ರ ನವೆಂಬರ್ 11 ರಂದು ಸಿದ್ದಗಂಗಾ ಮಠದ ಶ್ರೀ ಮರುಳಾರಾಧ್ಯ ಸ್ವಾಮಿಗಳವರ ಸಮಾಧಿ ಕ್ರಿಯೆಗೆ ಬಂದಾಗ ಶ್ರೀ ಉದ್ದಾನ ಶಿವಯೋಗಿಗಳವರ ಕೃಪಾದೃಷ್ಟಿಗೆ ಒಳಗಾಗಿದ್ದರು. ಬಳಿಕ 1930ರ ಮಾ.3ರಂದು ಸಿದ್ದಗಂಗಾ ಕ್ಷೇತ್ರದ ಉತ್ತರಾಧಿಕಾರಿಯಾಗಿ ಉದ್ದಾನ ಶ್ರೀಗಳು ಶಿವಣ್ಣ ಅವರನ್ನು ಆಯ್ಕೆ ಮಾಡಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…