ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ದರ್ಶನಕ್ಕೆ ಸಿದ್ಧಗಂಗಾ ಮಠದತ್ತ ಮಂಗಳವಾರ ಭಕ್ತ ಸಾಗರವೇ ಹರಿದು ಬರುತ್ತಿದೆ.
ಹರಿದು ಬರುತ್ತಿರುವ ಭಕ್ತರು ಯಾವುದೇ ಅಡ್ಡಿ ಇಲ್ಲದೆ ದರ್ಶನ ಪಡೆಯುವಂತಾಗಲು ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಉದ್ದ ಸರದಿಯಲ್ಲಿ ಜನ ನಿಂತಿದ್ದು, ಗಂಟೆ ಗಂಟೆಗೂ ಜನರ ಸಂಖ್ಯೆ ಹೆಚ್ಚುತ್ತಲೇ ಇದೆ.
ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಶಿವಕುಮಾರ ಸ್ವಾಮೀಜಿ ದರ್ಶನಕ್ಕೆ ಅವಕಾಶ. ನಂತರ ಸಮಯ ವಿಸ್ತರಣೆ ಇಲ್ಲ. 3.30ರ ಬಳಿಕ ಕ್ರಿಯಾಸಮಾಧಿ ಪ್ರಕ್ರಿಯೆ ನಡೆಯಲಿದೆ ಎಂದು ಕಿರಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಬರುವ ಭಕ್ತರಿಗೆ 10ಕ್ಕೂ ಹೆಚ್ಚು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಹಲವು ಹಳ್ಳಿಗಳ ಜನರು ಸ್ವಯಂ ಪ್ರೇರಿತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ತುಮಕೂರು ನಗರದಲ್ಲಿ ಅಘೋಷಿತ ಬಂದ್ ಏರರ್ಪಟ್ಟಿದ್ದು, ಬಹುತೇಕ ಅಂಗಡಿ ಮುಂಗಟ್ಟೆಗಳು ಮುಚ್ಚಿವೆ. ಹಲವು ಹೋಟೇಲ್ಗಳ ಮಾಲೀಕರು ಭಕ್ತರಿಗೆ ಉಚಿ ಉಪಹಾರ, ಊಟ ನೀಡುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…