Featured

ನನಗೂ ಶಾಸಕರಿಗೂ ಸಂಬಂಧವಿಲ್ಲ – ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ : ಸೂಕ್ತ ಶಿಕ್ಷೆಗೆ ಮಹಿಳೆ ಆಗ್ರಹ – Vishwanews24

ನನಗೂ ಶಾಸಕರಿಗೂ ಸಂಬಂಧವಿಲ್ಲ – ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ : ಸೂಕ್ತ ಶಿಕ್ಷೆಗೆ ಮಹಿಳೆ ಆಗ್ರಹ

ಮಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗುತ್ತಿದ್ದ, ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ಉಪ್ಪಿನಂಗಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇದರ ಬೆನಲ್ಲೇ ಇದೀಗ ಫೋಟೋದಲ್ಲಿ ಇರುವ ಮಹಿಳೆ ಸಹ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಇಂದು (ಏಪ್ರಿಲ್ 06) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಿಳೆ, ನನ್ನ ವೈಯಕ್ತಿ ಫೋಟೋಗಳನ್ನು ಪುತ್ತೂರಿನ ಶಾಸಕರ ಫೋಟೋ ಜೊತೆ ಜೋಡಿಸಿದ್ದು, ಎಡಿಟ್ ಮಾಡಿದ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ. ಇದರಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತುಂಬಾ ನೋವಾಗಿದೆ. ಓರ್ವ ಮಹಿಳೆ ಮೇಲೆ ಈ ರೀತಿ ದೌರ್ಜನ್ಯ ಎಸಗುತ್ತಿದ್ದಾರೆ. ಶಾಸಕರಿಗೂ ನನಗೂ ಸಂಬಂಧವಿಲ್ಲ. ಆದರೂ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈಗ ನನಗೆ ಬೆದರಿಕೆ ಕರೆಗಳು ಬರುತ್ತಿವೆ‌. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ತೆಗೆದುಕೊಂಡು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದ್ರೆ ನಾನು ಯಾವುದೇ ತಪ್ಪು ಮಾಡಿಲ್ಲ. ಎಡಿಟ್ ಮಾಡುವ ಕೌಶಲ್ಯತೆ ಜನರಲ್ಲಿ ಇದೆ. ಆದ್ರೆ, ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ. ಹಾಗೇ ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಯಾರು ಇದನೆಲ್ಲ ಮಾಡಿದ್ದಾರೆ ಅವರಿಗೆ ಸೂಕ್ತ ಶಿಕ್ಷೆ ಆಗಬೇಕೆಂದು ಮನವಿ ಮಾಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago