ಹಾಸನ: ಬೇಲೂರಿನ ಜೆಡಿಎಸ್ ಶಾಸಕ ಲಿಂಗೇಶ್ ಗುಜರಾತ್ನ ಇಬ್ಬರು ಮಾರ್ವಾಡಿಗಳ ಕೈಯಲ್ಲಿ ದೇಶ ನಲುಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಲಿಂಗೇಶ್, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಹರಿಹಾಯ್ದಿದ್ದಾರೆ. “ಗುಜರಾತ್ನ ಇಬ್ಬರು ಮಾರ್ವಾಡಿಗಳ ಕೈಯಲ್ಲಿ ದೇಶ ನಲುಗುತ್ತಿದೆ. ಉತ್ತರ ಭಾರತೀಯರ ಕೈಯಲ್ಲಿ ಸರ್ಕಾರಗಳು ನಲುಗುತ್ತಿವೆ. ದಕ್ಷಿಣ ಭಾರತೀಯರನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಡಿಕೆಶಿ ಬಂಧನವನ್ನು ಖಂಡಿಸಿದ ಜೆಡಿಎಸ್ ಶಾಸಕ, ಇಡಿಯನ್ನು ಬಳಸಿಕೊಂಡು ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಾಂವಿಧಾನಿಕ ಸಂಸ್ಥೆಗಳಿಂದ ವಿರೋಧ ಪಕ್ಷಗಳನ್ನು ಹತ್ತಿಕ್ಕಲಾಗುತ್ತಿದೆ. ಸ್ವಾಯತ್ತ ಸಂಸ್ಥೆ ಇಡಿಯನ್ನು ಬಳಸಿಕೊಂಡು ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಹಾಕಿದ್ದಾರೆ,” ಎಂದು ವಾಗ್ದಾಳಿ ನಡೆಸಿದರು.
ಆಪರೇಷನ್ ಕಮಲದ ಬಗ್ಗೆ ಲಿಂಗೇಶ್ ವೇದಿಕೆಯಲ್ಲೇ ಹೊಸ ಬಾಂಬ್ ಸಿಡಿಸಿದರು. “ಬಿಜೆಪಿಯವರು ನನಗೆಮಾತ್ರ ಅಲ್ಲ, ಮಾಜಿ ಸಚಿವ ಹೆಚ್.ಡಿ ರೇವಣ್ಣನವರಿಗೂ ಆಮಿಷ ಒಡ್ಡಿದ್ದರು. ಉಪಮುಖ್ಯ ಮಂತ್ರಿಯಾಗಿ ಮಾಡುವುದಾಗಿ ಆಮಿಷ ನೀಡಿದ್ದರು. ಐದು ಕೋಟಿ ಅಲ್ಲ, ಐವತ್ತು ಕೋಟಿಯವರೆಗೂ ನನಗೂ ಸೇರಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷರಿಗೂ ಬಿಜೆಪಿಗೆ ಬರುವಂತೆ ಆಮಿಷ ನೀಡಲಾಗಿತ್ತು,” ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…