ಹಾಸನ: ಬೇಲೂರಿನ ಜೆಡಿಎಸ್ ಶಾಸಕ ಲಿಂಗೇಶ್ ಗುಜರಾತ್ನ ಇಬ್ಬರು ಮಾರ್ವಾಡಿಗಳ ಕೈಯಲ್ಲಿ ದೇಶ ನಲುಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಲಿಂಗೇಶ್, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಹರಿಹಾಯ್ದಿದ್ದಾರೆ. “ಗುಜರಾತ್ನ ಇಬ್ಬರು ಮಾರ್ವಾಡಿಗಳ ಕೈಯಲ್ಲಿ ದೇಶ ನಲುಗುತ್ತಿದೆ. ಉತ್ತರ ಭಾರತೀಯರ ಕೈಯಲ್ಲಿ ಸರ್ಕಾರಗಳು ನಲುಗುತ್ತಿವೆ. ದಕ್ಷಿಣ ಭಾರತೀಯರನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಡಿಕೆಶಿ ಬಂಧನವನ್ನು ಖಂಡಿಸಿದ ಜೆಡಿಎಸ್ ಶಾಸಕ, ಇಡಿಯನ್ನು ಬಳಸಿಕೊಂಡು ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಾಂವಿಧಾನಿಕ ಸಂಸ್ಥೆಗಳಿಂದ ವಿರೋಧ ಪಕ್ಷಗಳನ್ನು ಹತ್ತಿಕ್ಕಲಾಗುತ್ತಿದೆ. ಸ್ವಾಯತ್ತ ಸಂಸ್ಥೆ ಇಡಿಯನ್ನು ಬಳಸಿಕೊಂಡು ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಹಾಕಿದ್ದಾರೆ,” ಎಂದು ವಾಗ್ದಾಳಿ ನಡೆಸಿದರು.
ಆಪರೇಷನ್ ಕಮಲದ ಬಗ್ಗೆ ಲಿಂಗೇಶ್ ವೇದಿಕೆಯಲ್ಲೇ ಹೊಸ ಬಾಂಬ್ ಸಿಡಿಸಿದರು. “ಬಿಜೆಪಿಯವರು ನನಗೆಮಾತ್ರ ಅಲ್ಲ, ಮಾಜಿ ಸಚಿವ ಹೆಚ್.ಡಿ ರೇವಣ್ಣನವರಿಗೂ ಆಮಿಷ ಒಡ್ಡಿದ್ದರು. ಉಪಮುಖ್ಯ ಮಂತ್ರಿಯಾಗಿ ಮಾಡುವುದಾಗಿ ಆಮಿಷ ನೀಡಿದ್ದರು. ಐದು ಕೋಟಿ ಅಲ್ಲ, ಐವತ್ತು ಕೋಟಿಯವರೆಗೂ ನನಗೂ ಸೇರಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷರಿಗೂ ಬಿಜೆಪಿಗೆ ಬರುವಂತೆ ಆಮಿಷ ನೀಡಲಾಗಿತ್ತು,” ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…