ಕೋಟ: ರಾಜ್ಯದ 30 ಜಿಲ್ಲೆಗಳ ಉಸ್ತುವಾರಿಯನ್ನು 16 ಸಚಿವರಿಗೆ ಹಂಚಬೇಕಾ ಗಿರುವುದರಿಂದ ಒಂದಷ್ಟು ಸಚಿವರಿಗೆ ಅಕ್ಕ-ಪಕ್ಕದ ಜಿಲ್ಲೆಯ ಹೊಣೆಗಾರಿಕೆ ನೀಡಲಾಗಿದೆ. ಇದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು ಯಾವುದೇ ಕಾರಣಕ್ಕೆ ಪ್ರಶ್ನಿಸಲಾರೆ; ನೀಡಿದ ಜವಬ್ದಾರಿಯನ್ನು ಪ್ರೀತಿಯಿಂದ ಸ್ವೀಕರಿಸಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅಭಿವೃದ್ಧಿಗೆ ಸಾಕಷ್ಟು ಅವಕಾಶವಿರುವ ರಾಜ್ಯದ ಜಿಲ್ಲೆಗಳಲ್ಲಿ ಬೆಂಗಳೂರಿನ ಅನಂತರದ ಸ್ಥಾನ ದ.ಕ. ಜಿಲ್ಲೆಗಿದೆ. 250 ಗ್ರಾ.ಪಂ.ಗಳಿವೆ. ನಮ್ಮದೇ ಪಕ್ಷದ 7 ಮಂದಿ ಶಾಸಕರು, ಸಂಸದರಿದ್ದಾರೆ. ರಾಜ್ಯದಲ್ಲೇ ಹೆಚ್ಚಿನ ಸಂಖ್ಯೆಯ ದೇಗುಲಗಳಿದ್ದು ಮುಜರಾಯಿ ಸಚಿವನಾಗಿರುವುದರಿಂದ ಅವುಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ.
ನನಗೆ ಉಡುಪಿ ಜಿಲ್ಲೆಯ ಉಸ್ತುವಾರಿ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಈ ಜಿಲ್ಲೆಯನ್ನು ಮರೆಯಲಾರೆ. ನನ್ನ ಖಾತೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ಮರಳು ಸಮಸ್ಯೆಗೆ ಸಾಕಷ್ಟು ಹೋರಾಟ ನಡೆಸಿದ್ದು ಒಂದು ವಾರದಲ್ಲಿ 171 ಗುತ್ತಿಗೆದಾರರಿಗೆ ಮರಳು ಪರವಾನಿಗೆ ನೀಡಿ ಮನೆಬಾಗಿಲಿಗೆ ಮರಳು ದೊರೆಯುವಷ್ಟು ಕೆಲಸ ಕಾರ್ಯಗಳಾಗಿವೆ ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…