ಕೋಟ: ರಾಜ್ಯದ 30 ಜಿಲ್ಲೆಗಳ ಉಸ್ತುವಾರಿಯನ್ನು 16 ಸಚಿವರಿಗೆ ಹಂಚಬೇಕಾ ಗಿರುವುದರಿಂದ ಒಂದಷ್ಟು ಸಚಿವರಿಗೆ ಅಕ್ಕ-ಪಕ್ಕದ ಜಿಲ್ಲೆಯ ಹೊಣೆಗಾರಿಕೆ ನೀಡಲಾಗಿದೆ. ಇದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು ಯಾವುದೇ ಕಾರಣಕ್ಕೆ ಪ್ರಶ್ನಿಸಲಾರೆ; ನೀಡಿದ ಜವಬ್ದಾರಿಯನ್ನು ಪ್ರೀತಿಯಿಂದ ಸ್ವೀಕರಿಸಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅಭಿವೃದ್ಧಿಗೆ ಸಾಕಷ್ಟು ಅವಕಾಶವಿರುವ ರಾಜ್ಯದ ಜಿಲ್ಲೆಗಳಲ್ಲಿ ಬೆಂಗಳೂರಿನ ಅನಂತರದ ಸ್ಥಾನ ದ.ಕ. ಜಿಲ್ಲೆಗಿದೆ. 250 ಗ್ರಾ.ಪಂ.ಗಳಿವೆ. ನಮ್ಮದೇ ಪಕ್ಷದ 7 ಮಂದಿ ಶಾಸಕರು, ಸಂಸದರಿದ್ದಾರೆ. ರಾಜ್ಯದಲ್ಲೇ ಹೆಚ್ಚಿನ ಸಂಖ್ಯೆಯ ದೇಗುಲಗಳಿದ್ದು ಮುಜರಾಯಿ ಸಚಿವನಾಗಿರುವುದರಿಂದ ಅವುಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ.
ನನಗೆ ಉಡುಪಿ ಜಿಲ್ಲೆಯ ಉಸ್ತುವಾರಿ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಈ ಜಿಲ್ಲೆಯನ್ನು ಮರೆಯಲಾರೆ. ನನ್ನ ಖಾತೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ಮರಳು ಸಮಸ್ಯೆಗೆ ಸಾಕಷ್ಟು ಹೋರಾಟ ನಡೆಸಿದ್ದು ಒಂದು ವಾರದಲ್ಲಿ 171 ಗುತ್ತಿಗೆದಾರರಿಗೆ ಮರಳು ಪರವಾನಿಗೆ ನೀಡಿ ಮನೆಬಾಗಿಲಿಗೆ ಮರಳು ದೊರೆಯುವಷ್ಟು ಕೆಲಸ ಕಾರ್ಯಗಳಾಗಿವೆ ಎಂದರು.
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್ಓಗೆ ಮನವಿ ಉಡುಪಿ: ಉಡುಪಿ…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ…
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್…