ಕೋಟ: ರಾಜ್ಯದ 30 ಜಿಲ್ಲೆಗಳ ಉಸ್ತುವಾರಿಯನ್ನು 16 ಸಚಿವರಿಗೆ ಹಂಚಬೇಕಾ ಗಿರುವುದರಿಂದ ಒಂದಷ್ಟು ಸಚಿವರಿಗೆ ಅಕ್ಕ-ಪಕ್ಕದ ಜಿಲ್ಲೆಯ ಹೊಣೆಗಾರಿಕೆ ನೀಡಲಾಗಿದೆ. ಇದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು ಯಾವುದೇ ಕಾರಣಕ್ಕೆ ಪ್ರಶ್ನಿಸಲಾರೆ; ನೀಡಿದ ಜವಬ್ದಾರಿಯನ್ನು ಪ್ರೀತಿಯಿಂದ ಸ್ವೀಕರಿಸಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅಭಿವೃದ್ಧಿಗೆ ಸಾಕಷ್ಟು ಅವಕಾಶವಿರುವ ರಾಜ್ಯದ ಜಿಲ್ಲೆಗಳಲ್ಲಿ ಬೆಂಗಳೂರಿನ ಅನಂತರದ ಸ್ಥಾನ ದ.ಕ. ಜಿಲ್ಲೆಗಿದೆ. 250 ಗ್ರಾ.ಪಂ.ಗಳಿವೆ. ನಮ್ಮದೇ ಪಕ್ಷದ 7 ಮಂದಿ ಶಾಸಕರು, ಸಂಸದರಿದ್ದಾರೆ. ರಾಜ್ಯದಲ್ಲೇ ಹೆಚ್ಚಿನ ಸಂಖ್ಯೆಯ ದೇಗುಲಗಳಿದ್ದು ಮುಜರಾಯಿ ಸಚಿವನಾಗಿರುವುದರಿಂದ ಅವುಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ.
ನನಗೆ ಉಡುಪಿ ಜಿಲ್ಲೆಯ ಉಸ್ತುವಾರಿ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಈ ಜಿಲ್ಲೆಯನ್ನು ಮರೆಯಲಾರೆ. ನನ್ನ ಖಾತೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ಮರಳು ಸಮಸ್ಯೆಗೆ ಸಾಕಷ್ಟು ಹೋರಾಟ ನಡೆಸಿದ್ದು ಒಂದು ವಾರದಲ್ಲಿ 171 ಗುತ್ತಿಗೆದಾರರಿಗೆ ಮರಳು ಪರವಾನಿಗೆ ನೀಡಿ ಮನೆಬಾಗಿಲಿಗೆ ಮರಳು ದೊರೆಯುವಷ್ಟು ಕೆಲಸ ಕಾರ್ಯಗಳಾಗಿವೆ ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…