Featured

ನನಗೆ ಎಂದೂ ನನ್ನ ಧರ್ಮವನ್ನು ಬದಲಾಯಿಸಬೇಕು ಎಂದು ಅನಿಸಿರಲಿಲ್ಲ, ನನ್ನ ಧರ್ಮದಲ್ಲಿ ನನಗೆ ನಂಬಿಕೆ ಇದೆ ; ನಾನು ಹಿಂದು ಹಾಗೂ ಪಾಕಿಸ್ತಾನಿ ಎನ್ನುವುದರ ಬಗ್ಗೆ ಹೆಮ್ಮೆ ಇದೆ : ದಿನೇಶ್ ಕನೇರಿಯಾ -Vishwanews24

ಕರಾಚಿ: ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿಷೇಧಕ್ಕೆ ಒಳಗಾಗಿರುವ ಪಾಕಿಸ್ತಾನದ ಲೆಗ್ ಸ್ಪಿನ್ನರ್ ದಿನೇಶ್ ಕನೇರಿಯಾ, ತಂಡದಲ್ಲಿ ಎಂದೂ ಮುತಾಂತರ ಆಗುವಂತೆ ನನ್ನ ಮೇಲೆ ಒತ್ತಡವಿರಲಿಲ್ಲ. ಆದರೆ, ಹಿಂದು ಎನ್ನುವ ಕಾರಣಕ್ಕೆ ನಾನು ಸಹ ಆಟಗಾರರಿಂದ ಟಾರ್ಗೆಟ್ ಆಗಿದ್ದು ನಿಜ ಎಂದು ಹೇಳಿದ್ದಾರೆ.

ಹಿಂದು ಆದ ಕಾರಣಕ್ಕೆ ಪಾಕಿಸ್ತಾನ ತಂಡದಲ್ಲಿ ದಿನೇಶ್ ಕನೇರಿಯಾರನ್ನು ಕೀಳಾಗಿ ಕಾಣುತ್ತಿದ್ದರು. ಅವರ ನಿರ್ವಹಣೆಗಳಿಗೆ ಶ್ರೇಯವನ್ನೇ ನೀಡುತ್ತಿರಲಿಲ್ಲ ಎಂದು ಅವರೊಂದಿಗೆ ಆಡಿದ್ದ ಆಟಗಾರ ಹಾಗೂ ಮಾಜಿ ವೇಗಿ ಶೋಯೆಬ್ ಅಖ್ತರ್ ಕಾರ್ಯಕ್ರಮವೊಂದರಲ್ಲಿ ಆರೋಪಿಸಿದ್ದರು. ಇದರ ಬೆನ್ನಲ್ಲಿಯೇ ಅಖ್ತರ್ ಹೇಳಿದ್ದ ಮಾತಿನಲ್ಲಿ ಸತ್ಯವಿದೆ ಎಂದಿರುವ ದಿನೇಶ್ ಕನೇರಿಯಾ, ತಮ್ಮ ಕೀಳಾಗಿ ಕಾಣುತ್ತಿದ್ದ ಆಟಗಾರರ ಹೆಸರನ್ನು ಬಹಿರಂಗ ಮಾಡುವುದಾಗಿ ಹೇಳಿದ್ದರು. ‘ಕೀಳಾಗಿ ಕಾಣುವಂಥ ವರ್ತನೆಗಳಿದ್ದವು. ಆದರೆ, ಇದನ್ನು ನಾನು ವಿವಾದ ಮಾಡುವ ಗೋಜಿಗೆ ಹೋಗಿರಲಿಲ್ಲ. ನಾನು ಅವರಿಂದ ದೂರ ಉಳಿಯುತ್ತಿದ್ದೆ. ನನ್ನ ನಿರ್ವಹಣೆ ಹಾಗೂ ಪಾಕಿಸ್ತಾನದ ಗೆಲುವಿನ ಬಗ್ಗೆ ಮಾತ್ರವೇ ಯೋಚನೆ ಮಾಡುತ್ತಿದ್ದೆ’ ಎಂದು ಸ್ಪಾಟ್ ಫಿಕ್ಸಿಂಗ್​ಗಾಗಿ ಆಜೀವ ನಿಷೇಧ ಶಿಕ್ಷೆಗೆ ಗುರಿಯಾಗಿರುವ ಕನೇರಿಯಾ ಹೇಳಿದ್ದಾರೆ.

ನಾನು ಹಿಂದು ಹಾಗೂ ಪಾಕಿಸ್ತಾನಿ ಎನ್ನುವುದರ ಬಗ್ಗೆ ಹೆಮ್ಮೆ ಇದೆ. ಈ ವಿಚಾರದಿಂದಾಗಿ ಪಾಕ್ ಕ್ರಿಕೆಟ್ ಕುಟುಂಬವನ್ನು ಕೆಟ್ಟದಾಗಿ ತೋರಿಸುವ ಪ್ರಯತ್ನ ಮಾಡಬೇಡಿ. ಯಾಕೆಂದರೆ, ಇಲ್ಲಿ ನನಗೆ ಬೆಂಬಲ ನೀಡಿದ ಸಾಕಷ್ಟು ಜನರಿದ್ದಾರೆ ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ ಆಗಿದ್ದ ಯೂಸುಫ್ ಯೊಹಾನ, ಇಸ್ಲಾಂಗೆ ಮತಾಂತರವಾಗಿದ್ದರು ಎನ್ನುವ ಪ್ರಶ್ನೆಗೆ ಉತ್ತರಿಸಿದ ಕನೇರಿಯಾ, ‘ಯೂಸುಫ್ ಮತಾಂತರವಾಗಿರುವುದು ವೈಯಕ್ತಿಕ ನಿರ್ಧಾರ. ನನಗೆ ಎಂದೂ ನನ್ನ ಧರ್ಮವನ್ನು ಬದಲಾಯಿಸಬೇಕು ಎಂದು ಅನಿಸಿರಲಿಲ್ಲ. ಯಾಕೆಂದರೆ, ನನ್ನ ಧರ್ಮದಲ್ಲಿ ನನಗೆ ನಂಬಿಕೆ ಇದೆ’ ಎಂದಿದ್ದಾರೆ.

ಬೆಂಬಲ ನೀಡಿದ್ದ ಇಂಜುಮಾಮ್ ಮಾಜಿ ನಾಯಕ ಇಂಜುಮಾಮ್ ಉಲ್ ಹಕ್ ನನಗೆ ಅಪಾರ ಬೆಂಬಲ ನೀಡಿದ್ದರು. ನನ್ನನ್ನು ಮ್ಯಾಚ್ ವಿನ್ನರ್ ಎಂದು ಅವರು ಕರೆಯುತ್ತಿದ್ದರು ಎಂದು ಕನೇರಿಯಾ ಹೇಳಿದ್ದಾರೆ

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

6 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago