Featured

ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ : ಹೆಚ್.ಡಿ ರೇವಣ್ಣ – vishwanews24

ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ : ಹೆಚ್.ಡಿ ರೇವಣ್ಣ

ಹಾಸನ: ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ  ಕಿಡಿಕಾರಿದ್ದಾರೆ.

ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್  ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಹೆಚ್.ಎಸ್ ಪ್ರಕಾಶನನ್ನು  ನಾಲ್ಕು ಬಾರಿ ಗೆಲ್ಲಿಸಿದ್ದರು. 2013ರಲ್ಲಿ ಪ್ರಕಾಶ್‌ಗೆ ಸೀಟ್ ಕೊಡಿಸಿಕೊಂಡು ಬಂದೆ, ಅಲ್ಪಸಂಖ್ಯಾತರಿಂದಾಗಿ ಪ್ರಕಾಶ್ ಸೋತರು ಎಂದು ಹೇಳಿದ್ದಾರೆ.

2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.

ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

23 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

24 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

24 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago