ಹಾಸನ: ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿಕಾರಿದ್ದಾರೆ.
ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಹೆಚ್.ಎಸ್ ಪ್ರಕಾಶನನ್ನು ನಾಲ್ಕು ಬಾರಿ ಗೆಲ್ಲಿಸಿದ್ದರು. 2013ರಲ್ಲಿ ಪ್ರಕಾಶ್ಗೆ ಸೀಟ್ ಕೊಡಿಸಿಕೊಂಡು ಬಂದೆ, ಅಲ್ಪಸಂಖ್ಯಾತರಿಂದಾಗಿ ಪ್ರಕಾಶ್ ಸೋತರು ಎಂದು ಹೇಳಿದ್ದಾರೆ.
2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.
ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…