ಮಂಡ್ಯ, : “ಕರ್ನಾಟಕ 2023ಕ್ಕೆ ಜನತಾದಳ ರಾಜ್ಯವಾಗಲಿದೆ. ನನಗೆ ಜನತೆ ಒಮ್ಮೆ ಐದು ವರ್ಷ ಅವಕಾಶ ಕಲ್ಪಿಸಲಿ. ಸಿಎಂ ಹೇಗೆ ಕೆಲಸ ಮಾಡಬೇಕು ಎನ್ನುವುದನ್ನು ತೋರಿಸಿಕೊಡುತ್ತೇನೆ. ಇಲ್ಲವಾದಲ್ಲಿ ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
“ಬಿಜೆಪಿ ನಾಯಕರು ರಾಮರಾಜ್ಯದ ವಿಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲಾಗುತ್ತಿಲ್ಲ. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಲೂಟಿ ಮಾಡಲು ಹಣವಿದೆ. ಚುನಾವಣೆ ಘೋಷಣೆಯಾಗಲಿ, ಎಲ್ಲಾ ವಿಚಾರವನ್ನು ಜನರ ಮುಂದಿಡುತ್ತೇನೆ” ಎಂದು ತಿಳಿಸಿದ್ದಾರೆ.
“ನಾನು 25 ಸಾವಿರ ಕೋಟಿ ಸಾಲಮನ್ನಾ ಮಾಡಿ ಕಮಿಷನ್ ಪಡೆದುಕೊಂಡಿದ್ದೇನಾ?. ರೈತರ ಸಾಲಮನ್ನಾ ಮಾಡಿದರೆ ಕಮಿಷನ್ ದೊರಕುವುದಿಲ್ಲ. ಹಾಗಾಗಿ ಬಿಜೆಪಿ ಎಲ್ಲಿಯೂ ಕೂಡಾ ಸಾಲಮನ್ನಾ ಮಾಡಿಲ್ಲ” ಎಂದಿದ್ದಾರೆ.
ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, “ರಾಧಿಕಾ ಯಾರು ಎಂದು ನನಗೆ ತಿಳಿದಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ಕೇಳಬೇಡಿ” ಎಂದು ಹೇಳಿದ್ದಾರೆ.
http://ಮಂಗಳೂರು : ತಮಿಳುನಾಡು ಮೂಲದ ಬೋಟ್ನಲ್ಲಿ ಸಿಲಿಂಡರ್ ಸ್ಪೋಟ ;11 ಮಂದಿ ಮೀನುಗಾರರ ರಕ್ಷಣೆ -Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…