ಮಂಡ್ಯ, : “ಕರ್ನಾಟಕ 2023ಕ್ಕೆ ಜನತಾದಳ ರಾಜ್ಯವಾಗಲಿದೆ. ನನಗೆ ಜನತೆ ಒಮ್ಮೆ ಐದು ವರ್ಷ ಅವಕಾಶ ಕಲ್ಪಿಸಲಿ. ಸಿಎಂ ಹೇಗೆ ಕೆಲಸ ಮಾಡಬೇಕು ಎನ್ನುವುದನ್ನು ತೋರಿಸಿಕೊಡುತ್ತೇನೆ. ಇಲ್ಲವಾದಲ್ಲಿ ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
“ಬಿಜೆಪಿ ನಾಯಕರು ರಾಮರಾಜ್ಯದ ವಿಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲಾಗುತ್ತಿಲ್ಲ. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಲೂಟಿ ಮಾಡಲು ಹಣವಿದೆ. ಚುನಾವಣೆ ಘೋಷಣೆಯಾಗಲಿ, ಎಲ್ಲಾ ವಿಚಾರವನ್ನು ಜನರ ಮುಂದಿಡುತ್ತೇನೆ” ಎಂದು ತಿಳಿಸಿದ್ದಾರೆ.
“ನಾನು 25 ಸಾವಿರ ಕೋಟಿ ಸಾಲಮನ್ನಾ ಮಾಡಿ ಕಮಿಷನ್ ಪಡೆದುಕೊಂಡಿದ್ದೇನಾ?. ರೈತರ ಸಾಲಮನ್ನಾ ಮಾಡಿದರೆ ಕಮಿಷನ್ ದೊರಕುವುದಿಲ್ಲ. ಹಾಗಾಗಿ ಬಿಜೆಪಿ ಎಲ್ಲಿಯೂ ಕೂಡಾ ಸಾಲಮನ್ನಾ ಮಾಡಿಲ್ಲ” ಎಂದಿದ್ದಾರೆ.
ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, “ರಾಧಿಕಾ ಯಾರು ಎಂದು ನನಗೆ ತಿಳಿದಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ಕೇಳಬೇಡಿ” ಎಂದು ಹೇಳಿದ್ದಾರೆ.
http://ಮಂಗಳೂರು : ತಮಿಳುನಾಡು ಮೂಲದ ಬೋಟ್ನಲ್ಲಿ ಸಿಲಿಂಡರ್ ಸ್ಪೋಟ ;11 ಮಂದಿ ಮೀನುಗಾರರ ರಕ್ಷಣೆ -Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…