Featured

ನನಗೆ ಜನರ ಆಶೀರ್ವಾದವಿದೆ ; ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ : ಸಿದ್ದರಾಮಯ್ಯ

 ಹಾಸನ: ನಾನು ಮತ್ತೆ ಮುಖ್ಯಮಂತ್ರಿ ಆಗಬಾರದು ಅಂತಾ ಎಲ್ಲರೂ ಒಂದಾಗಿದ್ದಾರೆ. ನನ್ನ ಆಡಳಿತದ ಅವಧಿಯಲ್ಲಿ ಎಲ್ಲಾ ಜಾತಿಯ ಬಡ ಜನರಿಗೆ ಸಹಾಯ ಮಾಡಿರುವೆ. ಹೀಗಾಗಿ ನನಗೆ ಜನರ ಆಶೀರ್ವಾದವಿದೆ, ಮತ್ತೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಹೊಳೇನರಸೀಪುರದಲ್ಲಿ ಮಾತನಾಡಿದ ಮಾಜಿ ಸಿಎಂ, ರಾಜಕೀಯ ಇಂದು ಹಣ ಮತ್ತು ಜಾತಿಯ ಮೇಲೆ ನಡೆಯುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಉತ್ತಮ ಕೆಲಸಗಳನ್ನು ಮಾಡುವವರನ್ನು ಗೆಲ್ಲಿಸಬೇಕು. ನನ್ನ ಆಡಳಿತದ ಅವಧಿಯಲ್ಲಿ ಹಾಲು, ಅಕ್ಕಿ, ಪಶು ಭಾಗ್ಯ, ಶೂ ಭಾಗ್ಯ ನೀಡಿರುವೆ. ಇವು ಕೇವಲ ಒಂದು ಜಾತಿಗೆ ಸಿಮೀತವಾಗಿಲ್ಲ ಎಂದು ಹೇಳಿದರು.

ನಾನು ರಾಜಕೀಯದಲ್ಲಿ ಹೆದರುವ ಪ್ರಮಯವೇ ಇಲ್ಲ. ಮುಂದೇಯೂ ಹೋರಾಡುತ್ತೇನೆ. ರಾಜಕೀಯ ಎನ್ನುವುದು ನಿಂತ ನೀರಲ್ಲ, ಅದು ಹರಿಯುವ ನೀರು. ಚಕ್ರ ಉರುಳಿದಂತೆ ಬದಲಾವಣೆ ಆಗಲೇಬೇಕು. ಮೇಲಿನವರು ಕೆಳಗೆ, ಕೆಳಗಿನವರು ಮತ್ತೆ ಮೇಲೆ ಬರಲೇ ಬೇಕು ಎಂದು ಪರೋಕ್ಷವಾಗಿ ರಾಜಕೀಯ ವಿರೋಧಿಗಳಿಗೆ ಕುಟುಕಿದ್ದಾರೆ.

ಸಮಾಜ ಸರಿಯಾಗಬೇಕು ಎಂದರೆ ಜಾತಿಭಾವನೆ ಇರಬಾರದು. ಎಲ್ಲರೂ ಬಸವಣ್ಣ ಮತ್ತು ಅಂಬೇಡ್ಕರ್ ಸಲಹೆಯಂತೆ ನಡೆದುಕೊಳ್ಳಬೇಕಿದೆ. ರಾಜ್ಯದ ಜನತೆ ಆಶೀರ್ವಾದದಿಂದ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ. ಆಗ ಇನ್ನುಳಿದ ಕೆಲಸಗಳನ್ನು ಮಾಡುತ್ತೇನೆ. ಮಹಿಳೆಯರಿಗೆ ಮೀಸಲಾತಿ ನೀಡಿರುವೆ, ದೀನದಲಿತರ ಬೆಳವಣಿಗೆಗೆ ಶ್ರಮಿಸಿದ್ದೇನೆ. ಈ ಕುರಿತು ನಾನು ಹೇಳಿಕೊಂಡಿಲ್ಲ. ಆದರೆ ಕೆಲವರು ಕೆಲಸ ಮಾಡದೆ ಹೇಳಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

34 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

54 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago