Featured

ನನಗೆ ಜನರ ಆಶೀರ್ವಾದವಿದೆ ; ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ : ಸಿದ್ದರಾಮಯ್ಯ

 ಹಾಸನ: ನಾನು ಮತ್ತೆ ಮುಖ್ಯಮಂತ್ರಿ ಆಗಬಾರದು ಅಂತಾ ಎಲ್ಲರೂ ಒಂದಾಗಿದ್ದಾರೆ. ನನ್ನ ಆಡಳಿತದ ಅವಧಿಯಲ್ಲಿ ಎಲ್ಲಾ ಜಾತಿಯ ಬಡ ಜನರಿಗೆ ಸಹಾಯ ಮಾಡಿರುವೆ. ಹೀಗಾಗಿ ನನಗೆ ಜನರ ಆಶೀರ್ವಾದವಿದೆ, ಮತ್ತೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಹೊಳೇನರಸೀಪುರದಲ್ಲಿ ಮಾತನಾಡಿದ ಮಾಜಿ ಸಿಎಂ, ರಾಜಕೀಯ ಇಂದು ಹಣ ಮತ್ತು ಜಾತಿಯ ಮೇಲೆ ನಡೆಯುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಉತ್ತಮ ಕೆಲಸಗಳನ್ನು ಮಾಡುವವರನ್ನು ಗೆಲ್ಲಿಸಬೇಕು. ನನ್ನ ಆಡಳಿತದ ಅವಧಿಯಲ್ಲಿ ಹಾಲು, ಅಕ್ಕಿ, ಪಶು ಭಾಗ್ಯ, ಶೂ ಭಾಗ್ಯ ನೀಡಿರುವೆ. ಇವು ಕೇವಲ ಒಂದು ಜಾತಿಗೆ ಸಿಮೀತವಾಗಿಲ್ಲ ಎಂದು ಹೇಳಿದರು.

ನಾನು ರಾಜಕೀಯದಲ್ಲಿ ಹೆದರುವ ಪ್ರಮಯವೇ ಇಲ್ಲ. ಮುಂದೇಯೂ ಹೋರಾಡುತ್ತೇನೆ. ರಾಜಕೀಯ ಎನ್ನುವುದು ನಿಂತ ನೀರಲ್ಲ, ಅದು ಹರಿಯುವ ನೀರು. ಚಕ್ರ ಉರುಳಿದಂತೆ ಬದಲಾವಣೆ ಆಗಲೇಬೇಕು. ಮೇಲಿನವರು ಕೆಳಗೆ, ಕೆಳಗಿನವರು ಮತ್ತೆ ಮೇಲೆ ಬರಲೇ ಬೇಕು ಎಂದು ಪರೋಕ್ಷವಾಗಿ ರಾಜಕೀಯ ವಿರೋಧಿಗಳಿಗೆ ಕುಟುಕಿದ್ದಾರೆ.

ಸಮಾಜ ಸರಿಯಾಗಬೇಕು ಎಂದರೆ ಜಾತಿಭಾವನೆ ಇರಬಾರದು. ಎಲ್ಲರೂ ಬಸವಣ್ಣ ಮತ್ತು ಅಂಬೇಡ್ಕರ್ ಸಲಹೆಯಂತೆ ನಡೆದುಕೊಳ್ಳಬೇಕಿದೆ. ರಾಜ್ಯದ ಜನತೆ ಆಶೀರ್ವಾದದಿಂದ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ. ಆಗ ಇನ್ನುಳಿದ ಕೆಲಸಗಳನ್ನು ಮಾಡುತ್ತೇನೆ. ಮಹಿಳೆಯರಿಗೆ ಮೀಸಲಾತಿ ನೀಡಿರುವೆ, ದೀನದಲಿತರ ಬೆಳವಣಿಗೆಗೆ ಶ್ರಮಿಸಿದ್ದೇನೆ. ಈ ಕುರಿತು ನಾನು ಹೇಳಿಕೊಂಡಿಲ್ಲ. ಆದರೆ ಕೆಲವರು ಕೆಲಸ ಮಾಡದೆ ಹೇಳಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago