ಬೆಳಗಾವಿ: “ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, “ಪಿತೂರಿ ಮಾಡುವವರು ಮಾಡುತ್ತಿರುತ್ತಾರೆ, ಆದರೆ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ನನ್ನ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ನಾಯಕರು ಕಾರಣಗಳು, ನಾವು ಮಾಡಿದ ಕೆಲಸಗಳ ಬಗ್ಗೆ, ಇತರ ವಿಚಾರಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವಿರೋಧದಿಂದ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳಿ ಸುಮ್ಮನಾಗುತ್ತಿದ್ದರು” ಎಂದು ಹೇಳಿದ್ದಾರೆ.
“ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕಿದಾಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ನಮ್ಮ ಶ್ರಮ, ನಮ್ಮ ಕೆಲಸವನ್ನು ಹೈಕಮಾಂಡ್ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ” ಎಂದು ಅವರು ಹೇಳಿದ್ದಾರೆ.
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…