ಯಾದಗಿರಿ,: .ಗ್ರಾಮ ವಾಸ್ತವ್ಯದ ವೇಳೆ ಫೈವ್ ಸ್ಟಾರ್ ಹೊಟೇಲ್’ನಲ್ಲಿ ತಂಗುತ್ತೇನೆ ಎಂದು ಕೆಲವರು ಆರೋಪಿಸಿದ್ದಾರೆ. ಆದರೆ ನನಗೆ ಫೈವ್ ಸ್ಟಾರ್ ಹೊಟೇಲ್ ಬೇಕಿಲ್ಲ. ನಾನು ರಸ್ತೆಯಲ್ಲೂ ಮಲಗಬಲ್ಲೆ, ನಾನು ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ನಾನು ಇಲ್ಲಿಗೆ ಒಂದು ಸಾಮಾನ್ಯ ಬಸ್ಸಿನಲ್ಲಿ ಬಂದಿದ್ದೇನೆ. ವೋಲ್ವೋ ಬಸ್ಸಿನಲ್ಲಲ್ಲ. ನನಗೆ ಬಿಜೆಪಿಯಿಂದ ಕಲಿಯುವ ಅಗತ್ಯವಿಲ್ಲ. ನಾನು ಗುಡಿಸಲಿನಲ್ಲೂ ಮಲಗಿದ್ದೇನೆ. ನಮ್ಮ ತಂದೆ ಪ್ರಧಾನಿಯಾಗಿದ್ದಾಗ ನಾನು ರಷ್ಯಾದ ಗ್ರಾಂಡ್ ಕ್ರೆಮ್ಸಲಿನ್ ಅರಮನೆಯಲ್ಲೂ ಮಲಗಿದ್ದೆ. ನಾನು ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ತಿಳಿಸಿದರು.
ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿ ಜನರ ಸಮಸ್ಯೆ ಆಲಿಸಿದ್ದ ಸಿಎಂ ಇಂದು ಕಲಬುರಗಿ ಜಿಲ್ಲೆಯ ಹೆರೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಬೇಕಿತ್ತು. ಆದರೆ ಹೆರೂರಿನಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಗ್ರಾಮವಾಸ್ತವ್ಯವನ್ನು ಮುಂದೂಡಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…