Featured

ನನಗೆ ಮುಖ್ಯಮಂತ್ರಿಯಾಗುವ ಯೋಗ ಬಂದರೆ ಯಾರು ತಡೆಯಲು ಸಾಧ್ಯವಿಲ್ಲ : ಎಚ್.ಡಿ ರೇವಣ್ಣ -Vishwanews24

ಬೆಂಗಳೂರು: ಮುಖ್ಯಮಂತ್ರಿಯಾಗುವ ಯೋಗ ಬಂದರೆ ಯಾರು ತಡೆಯಲು ಸಾಧ್ಯವಿಲ್ಲ. ಆದರೆ ಸದ್ಯಕ್ಕೆ ನಾನು ಸಚಿವನಾಗಿದ್ದೇನೆ. ಅಷ್ಟು ಸಾಕು. ನನಗೆ ಮುಖ್ಯಮಂತ್ರಿಯಾಗುವ ಆಸೆ ನನಗಿಲ್ಲವೆಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರೇವಣ್ಣ, ನನ್ನದು ಸ್ವಾತಿ ನಕ್ಷತ್ರ. ನನ್ನ ಮೇಲೆ ಯಾರು ಮಾಟ ಮಂತ್ರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಚಿವ ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ನಡುವಿನ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಜಿಲ್ಲಾಧಿಕಾರಿ ವಿರುದ್ಧ ರೇವಣ್ಣ ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿ ಹಾಗೂ ತಮ್ಮ ಮಧ್ಯೆ ಯಾವುದೇ ಗುದ್ದಾಟ ಇಲ್ಲ. ಯಾರ ಜೊತೆಯಲ್ಲಿಯೂ ಜಗಳ ಮಾಡಬೇಕಾದ ಅಗತ್ಯವೂ ಇಲ್ಲ.

ಬರನಿರ್ವಹಣೆ ಮಾಡಲು ಜಿಲ್ಲಾಡಳಿತ ಬಳಿ 10 ಕೋಟಿ ರೂ.ಗಿಂತಲೂ ಹೆಚ್ಚಿನ ಹಣವಿದೆ. ಅದನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿರಲಿಲ್ಲ. ಜಿಲ್ಲಾಡಳಿತದಲ್ಲಿ ನಾನು ತಲೆ ಹಾಕಿಲ್ಲ. ಮಾಧ್ಯಮಗಳ ಮುಂದೆಯೇ ಬರ ಪರಿಹಾರ ಬಿಡುಗಡೆ ಮಾಡಲು ಹೇಳಿದ್ದೆ. ಆಲೂಗಡ್ಡೆ ಬಿತ್ತನೆ ಬೀಜ ವಿತರಣೆಯಲ್ಲಿ ರೈತರಿಗೆ ಸಮಸ್ಯೆಯಾಗಬಾರದು. ಹಿಂದೆ ಇದೇ ಕಾರಣಕ್ಕಾಗಿ ಗೋಲಿಬಾರ್ ನಡೆದಿತ್ತು. ರೈತರಿಗೆ ತೊಂದರೆಯಾಗದಂತೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆಯೇ ಹೊರತು ಯಾವುದೇ ವೈಯಕ್ತಿಕ ಕಾರಣಗಳಿಂದ ಅವರ ಜೊತೆ ಹೊಡೆದಾಟ ಮಾಡಿಲ್ಲ ಎಂದು ರೇವಣ್ಣ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago