Featured

ನನಗೆ ಯಾವುದೇ ಅಸಮಾಧಾನವಾಗಿಲ್ಲ , ದಯವಿಟ್ಟು ನನ್ನ ಪರವಾಗಿ ಪ್ರತಿಭಟನೆಗಳನ್ನು ಮಾಡಬೇಡಿ : ಶ್ರೀರಾಮುಲು ಮನವಿ -Vishwanews24

ಬೆಂಗಳೂರು: ತಮಗೆ ಡಿಸಿಎಂ ಸ್ಥಾನ ನೀಡಿಲ್ಲ ಎಂದು ರಾಜ್ಯದ ಹಲವೆಡೆ ಪಕ್ಷಕ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪಕ್ಷದ ವಿರುದ್ಧ ನಡೆಯುತ್ತಿರುವ ಇಂತಹ ಯಾವುದೇ ಪ್ರತಿಭಟನೆಗಳನ್ನು ತಾವು ಖಂಡಿಸುವುದಾಗಿ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, ನನಗೆ ಯಾವುದೇ ಅಸಮಾಧಾನವಾಗಿಲ್ಲ. ಹೀಗಾಗಿ ದಯವಿಟ್ಟು ನನ್ನ ಪರವಾಗಿ ಪ್ರತಿಭಟನೆಗಳನ್ನು ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು ‘ನನಗೆ ಅಸಮಾಧಾನವಾಗಿದೆ ಎಂದು ನಮ್ಮ ಪಕ್ಷದ ವಿರುದ್ಧ ನಡೆಯುತ್ತಿರುವ ಯಾವುದೇ ಪ್ರತಿಭಟನೆಯನ್ನು ನಾನು ಖಂಡಿಸುತ್ತೇನೆ. ಇದು ಸರಿಯಲ್ಲ, ದಯವಿಟ್ಟು ಯಾರೂ ಹೀಗೆ ಮಾಡಬಾರದು ಎಂದು ನಾನು ಮನವಿ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಮೊದಲು… ಪಕ್ಷದ ಎಲ್ಲಾ ತೀರ್ಮಾನಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ’ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

 

ಬಳ್ಳಾರಿ, ಕೊಪ್ಪಳ ಹಾಗೂ ಚಿತ್ರದುರ್ಗದಲ್ಲಿ ಶ್ರೀರಾಮುಲು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಬಳ್ಳಾರಿಯ ಹೊಸಪೇಟೆಯಲ್ಲಿ ಶ್ರೀ ರಾಮುಲು ಅಭಿಮಾನಿಗಳು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದ್ದರು. ನಗರದ ರೋಟರಿ ವೃತ್ತದಲ್ಲಿ ಟೈಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago