Featured

ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ : ಮುರುಗೇಶ್ ನಿರಾಣಿ -Vishwanews24

ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ : ಮುರುಗೇಶ್ ನಿರಾಣಿ -Vishwanews24

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ರೈತರು ಸಹಕಾರ ಕೊಟ್ಟು ಒಪ್ಪುವುದಾದರೆ ಒಂದೂವರೆ ವರ್ಷದಲ್ಲಿ ಕಲಘಟಗಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡುತ್ತೇನೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವಲ್ಲಿ ನನ್ನದು ಯಾವುದೇ ಸ್ವಾರ್ಥವಿಲ್ಲ ಉದ್ಯೋಗ ಬೇರೆ ರಾಜಕಾರಣ ಬೇರೆ, ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ.

ನಗರದ ಹನ್ನೆರಡು ಮಠದಲ್ಲಿ ತಾಲೂಕಿನ ರೈತರ ಸಭೆಯಲ್ಲಿ ಮಾತನಾಡಿದ ನಿರಾಣಿ, ತಾಲೂಕಿನ ರೈತರು ಷೇರು ಸಂಗ್ರಹಿಸಿ ಉಳಿದ ಎಷ್ಟೇ ಹಣ ಖರ್ಚಾದರೂ ನಾನು ಸ್ವಂತ ದುಡ್ಡು ಹಾಕಿ ಸಕ್ಕರೆ ಕಾರ್ಖಾನೆ ಸ್ಥಾಪಿಸುತ್ತೇನೆ. ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಮಾಡುವುದರಿಂದ ಇಲ್ಲಿನ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ಸಾಕಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕೊಟ್ಟಂತಾಗುತ್ತದೆ. 12,200 ಎಕರೆ ಕಬ್ಬು ಕಲಘಟಗಿಯಲ್ಲಿ ಬೆಳೆಯುತ್ತಿದೆ ಒಂದು ತಿಂಗಳು ಸಮಯ ತೆಗೆದುಕೊಳ್ಳಿ ಒಂದು ಉತ್ತಮ ನಿರ್ಧಾರಕ್ಕೆ ಬನ್ನಿ ಆದಷ್ಟು ಬೇಗ ಸಕ್ಕರೆ ಕಾರ್ಖಾನೆ ಗುದ್ದಲಿ ಪೂಜೆ ಮಾಡಲು ಮುಂದಾಗೋಣ ಎಂದರು.

ಕಲಘಟಗಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವಲ್ಲಿ ನನ್ನದು ಯಾವುದೇ ಸ್ವಾರ್ಥವಿಲ್ಲ. ಉದ್ಯೋಗ ಬೇರೆ ರಾಜಕಾರಣ ಬೇರೆ ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ ನಿಮಗೆ ತಿಳಿದವರಿಗೆ ಮತಹಾಕಿ ಯಾವುದೇ ಪಕ್ಷ ಬೇಧವಿಲ್ಲದೆ ತಾಲೂಕಿನ ರೈತರು ಕಾರ್ಖಾನೆ ಸ್ಥಾಪಿಸುವಲ್ಲಿ ಸರ್ಕಾರದೊಂದಿಗೆ ಸಹಕಾರ ನೀಡಬೇಕು. ಆಗ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಶಾಸಕ ಸಿಎಂ ನಿಂಬಣ್ಣವರ್ ಮುಂದಾಳತ್ವದಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡೋಣ ನನ್ನ ಒಡೆತನದಲ್ಲಿ 9 ಸಕ್ಕರೆ ಕಾರ್ಖಾನೆಗಳಿದ್ದು ಭಾರತ ದೇಶದಲ್ಲಿ 2ನೇ ಸ್ಥಾನ ನಮಗೆ ಲಭಿಸಿದೆ ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ತಾಲೂಕು ಅಧ್ಯಕ್ಷ ಬಸವರಾಜ ಶೆರೆವಾಡ, ನಿಂಗಪ್ಪ ಸುತ್ತುಗಟ್ಟಿ, ಗೀತಾ ಮರಲಿಂಗಣ್ಣವರ, ಚಂದ್ರಗೌಡ ಪಾಟೀಲ್, ನರೇಶ್ ಮಲ್ನಾಡ, ಸೋಮು ಕೂಪ್ಪದ, ಮಹಾಂತೇಶ್ ಹೆಂಬ್ಲಿ, ಎಸ್ ಎಂ ಚಿಕ್ಕಣ್ಣವರ, ವಿ.ಎಸ್ ಪಾಟೀಲ್ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago