ಹುಬ್ಬಳ್ಳಿ: ಕಲಘಟಗಿ ತಾಲೂಕಿನ ರೈತರು ಸಹಕಾರ ಕೊಟ್ಟು ಒಪ್ಪುವುದಾದರೆ ಒಂದೂವರೆ ವರ್ಷದಲ್ಲಿ ಕಲಘಟಗಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡುತ್ತೇನೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವಲ್ಲಿ ನನ್ನದು ಯಾವುದೇ ಸ್ವಾರ್ಥವಿಲ್ಲ ಉದ್ಯೋಗ ಬೇರೆ ರಾಜಕಾರಣ ಬೇರೆ, ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ.
ನಗರದ ಹನ್ನೆರಡು ಮಠದಲ್ಲಿ ತಾಲೂಕಿನ ರೈತರ ಸಭೆಯಲ್ಲಿ ಮಾತನಾಡಿದ ನಿರಾಣಿ, ತಾಲೂಕಿನ ರೈತರು ಷೇರು ಸಂಗ್ರಹಿಸಿ ಉಳಿದ ಎಷ್ಟೇ ಹಣ ಖರ್ಚಾದರೂ ನಾನು ಸ್ವಂತ ದುಡ್ಡು ಹಾಕಿ ಸಕ್ಕರೆ ಕಾರ್ಖಾನೆ ಸ್ಥಾಪಿಸುತ್ತೇನೆ. ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಮಾಡುವುದರಿಂದ ಇಲ್ಲಿನ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ಸಾಕಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕೊಟ್ಟಂತಾಗುತ್ತದೆ. 12,200 ಎಕರೆ ಕಬ್ಬು ಕಲಘಟಗಿಯಲ್ಲಿ ಬೆಳೆಯುತ್ತಿದೆ ಒಂದು ತಿಂಗಳು ಸಮಯ ತೆಗೆದುಕೊಳ್ಳಿ ಒಂದು ಉತ್ತಮ ನಿರ್ಧಾರಕ್ಕೆ ಬನ್ನಿ ಆದಷ್ಟು ಬೇಗ ಸಕ್ಕರೆ ಕಾರ್ಖಾನೆ ಗುದ್ದಲಿ ಪೂಜೆ ಮಾಡಲು ಮುಂದಾಗೋಣ ಎಂದರು.
ಕಲಘಟಗಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವಲ್ಲಿ ನನ್ನದು ಯಾವುದೇ ಸ್ವಾರ್ಥವಿಲ್ಲ. ಉದ್ಯೋಗ ಬೇರೆ ರಾಜಕಾರಣ ಬೇರೆ ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ ನಿಮಗೆ ತಿಳಿದವರಿಗೆ ಮತಹಾಕಿ ಯಾವುದೇ ಪಕ್ಷ ಬೇಧವಿಲ್ಲದೆ ತಾಲೂಕಿನ ರೈತರು ಕಾರ್ಖಾನೆ ಸ್ಥಾಪಿಸುವಲ್ಲಿ ಸರ್ಕಾರದೊಂದಿಗೆ ಸಹಕಾರ ನೀಡಬೇಕು. ಆಗ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಶಾಸಕ ಸಿಎಂ ನಿಂಬಣ್ಣವರ್ ಮುಂದಾಳತ್ವದಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡೋಣ ನನ್ನ ಒಡೆತನದಲ್ಲಿ 9 ಸಕ್ಕರೆ ಕಾರ್ಖಾನೆಗಳಿದ್ದು ಭಾರತ ದೇಶದಲ್ಲಿ 2ನೇ ಸ್ಥಾನ ನಮಗೆ ಲಭಿಸಿದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ತಾಲೂಕು ಅಧ್ಯಕ್ಷ ಬಸವರಾಜ ಶೆರೆವಾಡ, ನಿಂಗಪ್ಪ ಸುತ್ತುಗಟ್ಟಿ, ಗೀತಾ ಮರಲಿಂಗಣ್ಣವರ, ಚಂದ್ರಗೌಡ ಪಾಟೀಲ್, ನರೇಶ್ ಮಲ್ನಾಡ, ಸೋಮು ಕೂಪ್ಪದ, ಮಹಾಂತೇಶ್ ಹೆಂಬ್ಲಿ, ಎಸ್ ಎಂ ಚಿಕ್ಕಣ್ಣವರ, ವಿ.ಎಸ್ ಪಾಟೀಲ್ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…